ಮಾಜಿ ಸಚಿವ ಸಿ.ಟಿ ರವಿಗೆ ಹೈಕಮಾಂಡ್ ಶಾಕ್

187

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬಿಜೆಪಿ ಮಾಜಿ ಸಚಿವ ಸಿ.ಟಿ ರವಿ ಅವರಿಗೆ ಹೈಕಮಾಂಡ್ ಶಾಕ್ ನೀಡಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಅವರನ್ನು ತೆಗೆದು ಹಾಕಲಾಗಿದೆ ಎಂದು ಹೇಳಲಾಗುತ್ತಿದೆ. ಆ ಸ್ಥಾನಕ್ಕೆ ತೆಲಂಗಾಣದ ಸಂಜಯ್ ಬಂಡಿಗೆ ನೇಮಿಸಲಾಗಿದೆಯಂತೆ.

ಸಿ.ಟಿ ರವಿಗೆ ನೀಡಿದ್ದ ರಾಷ್ಟ್ರೀಯ ಹುದ್ದೆಯನ್ನು ಹಿಂದಕ್ಕೆ ಪಡೆಯಲಾಗಿದೆ ಎಂದಾರೆ, ಅವರಿಗೆ ರಾಜ್ಯದಲ್ಲಿ ಉನ್ನತ ಸ್ಥಾನ ನಿಡಲಾಗುತ್ತಾ ಅನ್ನೋ ಪ್ರಶ್ನೆ ಮೂಡಿದೆ. ಯಾಕಂದರೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಆಕಾಂಕ್ಷಿಗಳ ಹೆಸರಿನಲ್ಲಿ ಇವರ ಹೆಸರು ಓಡಾಡುತ್ತಿದೆ. ಹೀಗಾಗಿ ಬಿಜೆಪಿ ಹೈಕಮಾಂಡ್ ಈ ರೀತಿ ನಡೆದುಕೊಂಡಿತಾ? ಅಥವ ಬೇರೆ ಜವಾಬ್ದಾರಿ ಏನಾದರೂ ನೀಡುತ್ತಾ ಕಾದು ನೋಡಬೇಕಿದೆ.

ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅಧಿಕಾರ ಅವಧಿ ಮುಗಿದಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತಿದೆ. ಹೀಗಿದ್ದರೂ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿಲ್ಲ. ಜೊತೆಗೆ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿಲ್ಲ. ಈ ಎರಡು ಕೆಲಸ ಶೀಘ್ರದಲ್ಲಿ ನಡೆಯುತ್ತೆ ಎನ್ನಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!