ಪ್ರಜಾಸ್ತ್ರ ಸುದ್ದಿ
ಚಿತ್ರದುರ್ಗ/ಮಂಗಳೂರು: ಶುಕ್ರವಾರ ಎಲ್ಲೆಡೆ ಸಂಭ್ರಮದಿಂದ ಗಣೇಶ ಹಬ್ಬ ಆಚರಣೆ ಮಾಡಲಾಗಿದೆ. ಆದ್ರೆ, ಕೋಟೆನಾಡಿನಲ್ಲಿ ಹಾಗೂ ಮಂಗಳೂರಿನಲ್ಲಿ ಗಣೇಶಮೂರ್ತಿ ಹಾಗೂ ಗಣೇಶ ಕಟ್ಟೆಗೆ ಹಾನಿ ಮಾಡಲಾಗಿದೆ. ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದು, ಸಾಕಷ್ಟು ಅನುಮಾನ ಮೂಡಿದೆ.
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಗ್ರಾಮದಲ್ಲಿ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ ವಿಗ್ರಹವನ್ನು ರಾತ್ರೋರಾತ್ರಿ ದುಷ್ಕರ್ಮಿಗಳು ಹಾನಿ ಮಾಡಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಉದನೆಯಲ್ಲಿ ಗಣಪತಿ ಕಟ್ಟೆಯನ್ನು ಧ್ವಂಸಗೊಳಿಸಿದ್ದಾರೆ. ಬೆಳಗ್ಗೆ ಗಣೇಶ ಹಬ್ಬ ಆಚರಿಸಿ ಸಂಜೆ ವಿಸರ್ಜನೆ ಮಾಡಲಾಗಿತ್ತು. ಇದಾದ ಮೇಲೆ ಅಲ್ಲಿನ ಕಟ್ಟೆಯನ್ನು ಧ್ವಂಸಗೊಳಿಸಿದ್ದಾರೆ.