ಪ್ರಜಾಸ್ತ್ರ ಸುದ್ದಿ
ನವದೆಹಲಿ: ಕೋವಿಡ್ 19 ಕಾರಣದಿಂದಾಗಿ ಕಳೆದ ಒಂದೂವರೆ ವರ್ಷದಿಂದ ಕಾಂಗ್ರೆಸ್ ಕಾರ್ಯಕರಣಿ ಸಭೆ ನಡೆದಿರಲಿಲ್ಲ. ಆ ಸಭೆ ಶನಿವಾರ ನಡೆಯಿತು. ಈ ವೇಳೆ ಮಾತನಾಡಿದ ಸೋನಿಯಾ ಗಾಂಧಿ, ನಾನೇ ಪೂರ್ಣಾವಧಿಯ ಹಾಗೂ ಸಕ್ರಿಯ ಅಧ್ಯಕ್ಷೆ ಎಂದು ಹೇಳಿದ್ದಾರಂತೆ.
ಇದೇ ವೇಳೆ ಮುಂಬರುವ ಚುನಾವಣೆಗಳು, ರಾಜಕೀಯ ಪರಿಸ್ಥಿತಿ, ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಿಕೊಂಡು ಹೋಗುವ ಹಾಗೂ ಪಕ್ಷಕ್ಕೆ ಒಗಟ್ಟಿನ ಶಕ್ತಿ ತುಂಬುವ ಕೆಲಸದ ಕುರಿತು ಚರ್ಚಿಸಿದ್ದಾರೆ. ಇನ್ನು ರಾಷ್ಟ್ರೀಯ ಆಸ್ತಿಗಳನ್ನು ಮಾರಾಟ ಮಾಡಿ ಪಾತಳಕ್ಕೆ ಕುಸಿದಿರುವ ಆರ್ಥಿಕ ಪರಿಸ್ಥಿತಿಯನ್ನು ಸರಿದಾರಿಗೆ ತರಬಹುದು ಅನ್ನೋ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಗುಲಾಂ ನಬಿ ಆಜಾದ್, ಮಲ್ಲಿಕಾರ್ಜುನ್ ಖರ್ಗೆ, ಅಂಬಿಕಾ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಕೆ.ಸಿ ವೇಣುಗೋಪಾಲ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.