ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಅರಬ್ಬಿ ಸಮುದ್ರದಲ್ಲಿನ ಮೇಲ್ಮೈಯಿಂದ ಎದ್ದಿರುವ ಗಾಳಿಯಿಂದಾಗಿ ತೌಕ್ತೆ ಚಂಡಮಾರುತ ಉಂಟಾಗಿದೆ. ಇದರ ಪರಿಣಾಮ ಕರ್ನಾಟಕದ ಮೇಲೂ ಆಗಿದ್ದು, ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಕೇರಳದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
ತೌಕ್ತೆ ಚಂಡಮಾರುತದಿಂದಾಗಿ ರಾಜ್ಯದ 6 ಜಿಲ್ಲೆಗಳಲ್ಲಿ ಭಾರಿ ಮಳೆಯಾಗ್ತಿದೆ. ಕರವಾಳಿ, ಮಲೆನಾಡು ಭಾಗದಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. 73 ಗ್ರಾಮಗಳು ಇದ್ರಿಂದ ಹಾನಿಗೆ ಒಳಗಾಗಿವೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ ಜನರ ಸಮಸ್ಯೆಗೆ ಸ್ಪಂದಿಸಲು ಜಿಲ್ಲಾ ಉಸ್ತುವಾರಿ ಸಚಿವರಿಗೆ, ಅಧಿಕಾರಿಗಳಿಗೆ ತಿಳಿಸುವುದಾಗಿ ಹೇಳಿದ್ದಾರೆ.