ಸಿಲಿಂಡರ್ ಸ್ಫೋಟ: ಮೂವರ ಸಾವು

211

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬಹುಮಹಡಿ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ನಗರದ ದೇವರಚಿಕ್ಕನಹಳ್ಳಿಯಲ್ಲಿ ನಡೆದಿದೆ. ಆಶ್ರಿತ್ ಅಪಾರ್ಟ್ ಮೆಂಟ್ ನಲ್ಲಿ ಬೆಂಕಿ ಅನಾಹುತ ಸಂಭವಿಸಿ ಮೂವರು ಸಹಜೀವ ದಹನವಾಗಿದ್ದಾರೆ. ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಿಲಿಂಡರ್ ಸ್ಫೋಟಗೊಂಡ ಬಳಿಕ ನೋಡು ನೋಡುತ್ತಿದ್ದಂತೆ ಒಂದು ಫ್ಲೋರ್ ನಿಂದ ಮೂರು ಫ್ಲೋರ್ ಗಳಿಗೆ ಬೆಂಕಿ ಕೆನ್ನಾಲಿಗೆ ಆವರಿಸಿಕೊಂಡಿದೆ. ರಕ್ಷಣೆಗೆ ಮಹಿಳೆಯೊಬ್ಬರು ಕೂಗುತ್ತಿದ್ದರೂ ಯಾರೊಬ್ಬರು ಹೋಗದ ಸ್ಥಿತಿ ನಿರ್ಮಾಣವಾಗಿ ಸಹಜೀವ ದಹನವಾಗಿದ್ದಾರೆ.

ಮಧ್ಯಾಹ್ನದ ಸಮಯದಲ್ಲಿ ಈ ಅನಾಹುತವಾಗಿದ್ದರಿಂದ ಹೆಚ್ಚಿನ ದುರಂತ ಸಂಭವಿಸಿಲ್ಲ. ಘಟನೆ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೇಗೂರು ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!