ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮನೆಯಲ್ಲಿ ಅಡುಗೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಐವರು ಗಾಯಗೊಂಡ ಘಟನೆ ಆನೇಕಲ್ ತಾಲೂಕಿನ ಮಾರುತಿ ಬಡಾವಣೆಯಲ್ಲಿ ನಡೆದಿದೆ. ಜಮಾಲ್(32), ನಾಜಿಯಾ(22), ಇರ್ಫಾನ್(21), ಗುಲಾಬ್(18) ಹಾಗೂ ಶಹಜಾದ್(09) ಗಾಯಗೊಂಡಿದ್ದಾರೆ.
ಇಂದು ಮುಂಜಾನೆ ಮನೆಯಲ್ಲಿ ಲೈಟ್ ಆನ್ ಮಾಡುವ ಸಂದರ್ಭದಲ್ಲಿ ಸ್ಫೋಟ ಸಂಭವಿಸಿದೆ. ಈ ವೇಳೆ ಸಿಲಿಂಡರ್ ನಲ್ಲಿ ಅನಿಲ ಸೋರಿಕೆಯಾಗುತ್ತಿತ್ತು ಎನ್ನಲಾಗುತ್ತಿದೆ. ಉತ್ತರ ಪ್ರದೇಶ ಮೂಲದ ಇವರು ಮಾರ್ಟಿನ್ ಎಂಬುವರ ಮನೆಯಲ್ಲಿ ಬಾಡಿಗೆಗೆ ಇದ್ದಾರೆ.