ಪ್ರಜಾಸ್ತ್ರ ಸುದ್ದಿ
ಪುಣೆ: ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 11 ವರ್ಷಗಳ ಬಳಿಕ ಕೋರ್ಟ್ ತೀರ್ಪು ನೀಡಿದ್ದು, ಇಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಮೂವರು ಖುಲಾಸೆಗೊಂಡಿದ್ದಾರೆ.
ಶರದ್ ಕಲಾಸ್ಕರ್ ಹಾಗೂ ಸಚಿನ್ ಅಂದರೆ ಇಬ್ಬರಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 5 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಸಂಜೀವ್ ಪುನಾಲೇಕರ್, ವಿರೇಂದ್ರ ಸಿಂಗ್ ತಾವ್ಡೆ ಹಾಗೂ ವಿಕ್ರಮ್ ಭಾವೆ ವಿರುದ್ಧ ಸಾಕ್ಷಾಧಾರಗಳ ಕೊರತೆಯಿಂದ ಖುಲಾಸೆಗೊಂಡಿದ್ದಾರೆ.
ಆಗಸ್ಟ್ 20, 2013ರಂದು ಗುಂಡು ಹಾರಿಸಿ ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆ ಮಾಡಲಾಗಿತ್ತು.