ಪ್ರಜಾಸ್ತ್ರ ಸಿನಿಮಾ ಡೆಸ್ಕ್
ನವದೆಹಲಿ: ದಕ್ಷಿಣ ಭಾರತದ ಸೂಪರ್ ಸ್ಟಾರ್ ನಟ ರಜನಿಕಾಂತ್ ಗೆ ಸಿನಿ ರಂಗದ ಪ್ರತಿಷ್ಠಿತ ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಆಯ್ಕೆ ಸಮಿತಿ ಸದಸ್ಯರಾಗಿರುವ ಬಿಸ್ವಜೀತ್ ಚಟರ್ಜಿ ಈ ಬಗ್ಗೆ ಮಾತನಾಡಿ ಅಧಿಕೃತವಾಗಿ ತಿಳಿಸಿದ್ದಾರೆ.
ಇನ್ನು ಪ್ರಶಸ್ತಿ ಕುರಿತು ಮಾತನಾಡಿರುವ ರಜನಿ, ಪ್ರಶಸ್ತಿ ಬಂದಿದ್ದಕ್ಕೆ ಖುಷಿಯಾಗಿದೆ. ಈ ವೇಳೆ ನಾನು ನನ್ನ ಮಾರ್ಗದರ್ಶಕರಾಗಿದ್ದ ಕೆ.ಬಾಲಚಂದರ್ ಸರ್ ಅವರನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದಿದ್ದು, ಪ್ರಶಸ್ತಿ ಪಡೆದ ಬಳಿಕ ಹೆಚ್ಚು ಮಾತನಾಡುತ್ತೇನೆ ಅಂತಾ ಹೇಳಿದ್ದಾರೆ.