ಮಂಗಳೂರು: ಕಾಸರಗೋಡು ಸೇರಿದಂತೆ ರಾಜ್ಯದ ನೆರೆಯ ಜಿಲ್ಲೆಗಳಲ್ಲಿ ಕರೋನಾ ಪೀಡಿತರ ಸಂಖ್ಯೆ ಹೆಚ್ಚಾಗ್ತಿರುವ ಹಿನ್ನೆಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಜಿಲ್ಲೆಯಾದ್ಯಂತ ವ್ಯಾಪಾರ ವಹಿವಾಟು ಸೇರಿದಂತೆ ಎಲ್ಲವನ್ನೂ ಬಂದ್ ಗೆ ಆದೇಶಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ಶುಕ್ರವಾರ ರಾತ್ರಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹೀಗಾಗಿ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ ಅವರು, ಸಂಪೂರ್ಣ ಬಂದ್ ಗೆ ಆದೇಶಿಸಿದ್ದು ಇಡೀ ಜಿಲ್ಲೆ ಸ್ತಬ್ಧವಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಕರೋನಾ ಹರಡುವುದನ್ನ ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನ ತೆಗೆದುಕೊಳ್ಳಲಾಗಿದೆ.
ಇನ್ನು ಹಾಲು, ದಿನಪತ್ರಿಕೆ, ಅಗತ್ಯ ವಸ್ತುಗಳ ಪೂರೈಕೆಗೆ ನಿರ್ಬಂಧ ಹೇರಿಲ್ಲ. ಆದ್ರೆ, ಸಂಪೂರ್ಣವಾಗಿ ಜನರ ಓಡಾಟ ನಿಲ್ಲಿಸಲಾಗಿದೆ. ಈ ಸಂಬಂಧ ನಿನ್ನೆ ಸಂಜೆಯ ಪ್ರಕಟಣೆಯನ್ನ ಹೊರಡಿಸಿದ್ದಾರೆ.