ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಅಕಾಲಿಕ ಮಳೆ ಸಾಕಷ್ಟು ಅವಾಂತರ ಸೃಷ್ಟಿಸಿದೆ. ಇದರಿಂದಾಗಿ ಅಪಾರ ಪ್ರಮಾಣದಲ್ಲಿ ಆಸ್ತಿ ಪಾಸ್ತಿ, ಬೆಳೆ ಹಾನಿಯಾಗಿದೆ. ಕೆಲವು ಕಡೆ ಜೀವ ಹಾನಿಯಾಗಿದೆ. ಈ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಬೊಮ್ಮಾಯಿ, ಹಾನಿಯ ಬಗ್ಗೆ ವರದಿ ಬಂದ 24 ಗಂಟೆಯಲ್ಲಿ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.
ವರದಿ ಬಂದ 24 ಗಂಟೆಯಲ್ಲಿ ರೈತರಿಗೆ ಪರಿಹಾರ ನೀಡಬೇಕು. ಸಂಪೂರ್ಣ ಮನೆ ಹಾನಿಯಾಗಿದ್ದರೆ 5 ಲಕ್ಷ ರೂಪಾಯಿ. ತಕ್ಷಣ 1 ಲಕ್ಷ ರೂಪಾಯಿ ನೀಡಬೇಕು ಎಂದು ಸೂಚಿಸಲಾಗಿದೆ ಎಂದಿದ್ದಾರೆ. ಮಳೆಯಿಂದ ಹಾನಿಗೆ ಸಂಬಂಧಿಸಿದಂತೆ ಸಮೀಕ್ಷೆಯನ್ನು ವೇಗವಾಗಿ ನಡೆಸಲು ಹೇಳಲಾಗಿದೆ. ಬೆಳೆ ನಷ್ಟದ ಬಗ್ಗೆ ಸಮೀಕ್ಷೆ ವರದಿ ಪರಿಹಾರ ಆಪ್ ನಲ್ಲಿ ಸಲ್ಲಿಸಿದ 24 ಗಂಟೆಯಲ್ಲಿ ರೈತರ ಖಾತೆಗೆ ಪರಿಹಾರ ಜಮಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದ್ದಾರೆ.