ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಕಾಟೇರ ಚಿತ್ರದ ಸಕ್ಸಸ್ ಅಲೆಯಲ್ಲಿ ತೇಲಾಡುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ತಂಡ, ಅಭಿಮಾನಿಗಳು ಇಂದು ಅವರ ಹುಟ್ಟು ಹಬ್ಬವನ್ನು ಅದ್ಧೂರಿಯಿಂದ ಆಚರಿಸುತ್ತಿದ್ದಾರೆ. ಇದರ ನಡುವೆ ಅವರು 59ನೇ ಚಿತ್ರದ ಪೋಸ್ಟರ್ ರಿಲೀಸ್ ಆಗಿದೆ.
ವೀರ ಸಿಂಧೂರ ಲಕ್ಷ್ಮಣನ ಸಾಹಸಗಾಥೆ ಹೇಳಲು ಸಜ್ಜಾಗಿದ್ದಾರೆ. ಯಜಮಾನ, ಕ್ರಾಂತಿ ಚಿತ್ರದ ಬಳಿಕ ಶೈಲಜಾ ನಾಗ್ ಹಾಗೂ ಬಿ.ಸುರೇಶ್ ಅವರು ದರ್ಶನ್ ಜೊತೆಗೆ ಐತಿಹಾಸಿಕ ಚಿತ್ರ ಘೋಷಿಸಿದ್ದಾರೆ. ಶೈಲಜಾ ನಾಗ್ ಅವರ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟರ್ ಹಂಚಿಕೊಂಡಿದ್ದಾರೆ.
ಹೆಗಲಿಗೆ ಗನ್, ಕೈಯಲ್ಲಿ ಕೊಡಲಿ ಹಿಡಿದು ನಿಂತಿರುವ ಪೋಸ್ಟರ್ ಸಾಕಷ್ಟು ಕುತೂಹಲ ಮೂಡಿಸಿದೆ. ತರುಣ್ ಕಿಶೋರ್ ಸುಧೀರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ವಿ.ಹರಿಕೃಷ್ಣ ಸಂಗೀತ ನೀಡುತ್ತಿದ್ದಾರೆ. ಈ ಟೀಂ ಈಗಾಗ್ಲೇ ಮಾಡಿರುವ ಸಿನಿಮಾಗಳು ಸೂಪರ್ ಹಿಟ್ ಆಗಿದ್ದು, ಈಗ ಮತ್ತೊಂದು ಹಿಟ್ ಸಿನಿಮಾ ನೀಡಲು ಸಜ್ಜಾಗಿದೆ.