ದಚ್ಚು ಮಾತಿಗೆ ಅಪ್ಪು ಫ್ಯಾನ್ಸ್ ಗರಂ

192

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಕ್ರಾಂತಿ ಸಿನಿಮಾ ಸಿಕ್ಕಾಪಟ್ಟೆ ಹವಾ ಕ್ರಿಯೇಟ್ ಮಾಡಿದೆ. ದರ್ಶನ್ ಅಭಿಮಾನಿಗಳು ಕ್ರಾಂತಿ ಸಿನಿಮಾದ ಪ್ರಚಾರ ಭರ್ಜರಿಯಾಗಿ ನಡೆಸಿದ್ದಾರೆ. ಇದರ ನಡುವೆ ದರ್ಶನ್ ಸಂದರ್ಶನವೊಂದರ ವೇಳೆ ನೀಡಿದ ಹೇಳಿಕೆ ಅಪ್ಪು ಅಭಿಮಾನಿಗಳು ಗರಂ ಆಗುವಂತೆ ಮಾಡಿದೆ.

“ಸಹಜವಾಗಿ ನಾವು ಸತ್ತಮೇಲೆ ನೋಡಿದ್ದೇವೆ. ಫ್ಯಾನ್ಸ್‌ಗಳು ಅಂದ್ರೆ ಹೇಗೆ ಎಂದು. ಪುನೀತ್ ರಾಜ್‌ಕುಮಾರ್ ಒಬ್ಬರದ್ದೇ ಸಾಕು. ಫ್ಯಾನ್ಸ್‌ಗಳು ನಾನು ಬದುಕಿದ್ದಾಗಲೇ ತೋರಿಸಿ ಬಿಟ್ಟರಲ್ಲ ನನಗೆ ಅಷ್ಟೇ ಸಾಕು ಅನಿಸಬಿಡ್ತು. ಬಿಡಯ್ಯ ಇದಕ್ಕಿಂತ ಇನ್ನೇನು ಬೇಕು.” ಅಂತ ಹೇಳಿರುವ ವಿಡಿಯೋ ವರೈಲ್ ಆಗಿದ್ದು, ಅಪ್ಪು ಫ್ಯಾನ್ಸ್ ಕಿಡಿ ಕಾರಿದ್ದಾರೆ.. ಕ್ರಾಂತಿ ಸಿನಿಮಾ ಬಿಡುಗಡೆ ಮಾಡಲು ಬಿಡುವುದಿಲ್ಲವೆಂದು ಹೇಳುತ್ತಿದ್ದಾರೆ.

ಪುನೀತ್ ಬಗ್ಗೆ ದರ್ಶನ್ ನೀಡಿದ ಹೇಳಿಕೆ ಬಗ್ಗೆ ಕ್ಷಮೆ ಕೇಳಬೇಕು. ಇಲ್ಲದೆ ಹೋದರೆ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ಹೊಸಪೇಟೆಯಲ್ಲಿ ಅಪ್ಪು ಫ್ಯಾನ್ಸ್ ಫುಲ್ ಗರಂ ಆಗಿದ್ದು, ದರ್ಶನ್ ಕ್ಷಮೆ ಕೇಳದಿದ್ದರೆ ಅವರ ಯಾವ ಸಿನಿಮಾನೂ ಹೊಸಪೇಟೆಯಲ್ಲಿ ರಿಲೀಸ್ ಆಗಲು ಬಿಡುವುದಿಲ್ಲವೆಂದು ಎಚ್ಚರಿಕೆ ನೀಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!