ಮಹಿಷ ದಸರಾಗೆ ಹೆಚ್ಚಿದ ವಿರೋಧ

195

ಪ್ರಜಾಸ್ತ್ರ ಸುದ್ದಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಸಂಭ್ರಮದ ಹೊತ್ತಿನಲ್ಲಿ ಮಹಿಷ ದಸರಾ ಆಚರಣೆಗೆ ಸಿದ್ಧತೆ ನಡೆದಿದ್ದು, ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ವಿಚಾರವಾದಿಗಳ ತಂಡ, ಮೈಸೂರು ವಿಶ್ವವಿದ್ಯಾಲಯದ ಸಂಶೋಧಕರ ಸಂಘ ಮಹಿಷ ದಸರಾ ಆಚರಣೆಗೆ ಸಿದ್ಧತೆ ನಡೆಸಿದ್ದು, ಇದನ್ನು ವಿರೋಧಿಸಿ ಇಂದು ಭಕ್ತರು ಚಾಮುಂಡಿ ಬೆಟ್ಟವನ್ನು ಬರಿಗಾಲಲ್ಲಿ ಹತ್ತಿ ಪೂಜೆ ಸಲ್ಲಿಸಿದರು.

ಇನ್ನೊಂದು ಕಡೆ ಸ್ನೇಹಮಹಿ ಕೃಷ್ಣ ಎಂಬುವರು ಮಹಿಷ ದಸರಾ ಆಚರಣೆಗೆ ತಡೆ ನೀಡಬೇಕೆಂದು ಹೈಕೋರ್ಟ್ ಮೆಟ್ಟಿಲು ಏರಿದ್ದು, ನಾಳೆ ವಿಚಾರಣೆಗೆ ಬರಲಿದೆ. ಮಹಿಷ ದಸರಾ ಆಚರಣೆ ಸಮಿತಿಯಿಂದ ಪೋಸ್ಟರ್ ಬಿಡುಗಡೆಯಾಗಿದ್ದು, ಅಕ್ಟೋಬರ್ 13ರಂದು ಆಚರಿಸಲು ಸಜ್ಜಾಗಿದ್ದಾರೆ. ಅಂದು ಯಾವ ರೀತಿ ವಿರೋಧ ವ್ಯಕ್ತವಾಗುತ್ತೆ ಅನ್ನೋ ಕುತೂಹಲ ಮೂಡಿದೆ.




Leave a Reply

Your email address will not be published. Required fields are marked *

error: Content is protected !!