ಪ್ರಜಾಸ್ತ್ರ ಅಂತಾರಾಷ್ಟ್ರೀಯ ಸುದ್ದಿ
ಕರಾಚಿ: ಭಾರತಕ್ಕೆ ಬೇಕಾದ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ವಿಷ ಪ್ರಾಶನ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಕೆಲ ಅಧಿಕೃತ ಮೂಲಗಳ ಪ್ರಕಾರ ಕರಾಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ವಿಚಾರವಾಗಿ ಪಾಕಿಸ್ತಾನದಲ್ಲಿ ಇಂಟರ್ ನೆಟ್ ಸೇವೆ ಸ್ಥಗತಿಗೊಳಿಸಲಾಗಿದೆ ಎನ್ನಲಾಗುತ್ತಿದೆ. ಬಿಗಿ ಭದ್ರತೆಯ ನಡುವೆ ಆತನನ್ನು ಆಸ್ಪತ್ರೆಗೆ ಸಾಗಿಸಲಾಗಿದೆಯಂತೆ ಆಸ್ಪತ್ರೆಯ ಮೊದಲ ಮಹಡಿಯಲ್ಲಿ ಆತನೊಬ್ಬನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆಪ್ತರು, ಕುಟುಂಬಸ್ಥರು ಹೊರತುಪಡಿಸಿ ಬೇರೆ ಯಾರಿಗೂ ಪ್ರವೇಶವಿಲ್ಲ ಅನ್ನೋ ವರದಿ ಹರಿದಾಡುತ್ತಿದೆ. ಇದರಿಂದಾಗಿ ಪಾಕಿಸ್ತಾನದ ಮಾನ ಮರ್ಯಾದೆ ಮತ್ತೊಮ್ಮೆ ಹರಾಜಾಗುತ್ತಿದೆ.
1993ರಲ್ಲಿ ಮುಂಬೈನಲ್ಲಿ ಸರಣಿ ಬಾಂಬ್ ಸ್ಫೋಟದ ಮಾಸ್ಟರ್ ಮೈಂಡ್ ಈತ. ಅಂದು 250ಕ್ಕೂ ಹೆಚ್ಚು ಮುಗ್ದರು ಪ್ರಾಣ ಕಳೆದುಕೊಂಡರು. 750ಕ್ಕೂ ಹೆಚ್ಚು ಜನರು ಗಾಯಗೊಂಡರು. ಅಲ್ಲಿಂತ ತಲೆ ಮರೆಸಿಕೊಂಡು ವಿದ್ವಾಂಸಕ ಕೃತ್ಯಗಳನ್ನು ನಡೆಸುತ್ತಿದ್ದ. ಪಾಕಿಸ್ತಾನದಲ್ಲಿ ದಾವುದ್ ಅಡಗಿಕೊಂಡಿದ್ದಾನೆ ಎಂದು ಭಾರತ ಹೇಳುತ್ತಾ ಬಂದರೂ ಪಾಕ್ ಇದನ್ನು ಅಲ್ಲಗೆಳೆಯುತ್ತಾ ಬಂದಿದೆ. ಈಗ ಘಟನೆಯಿಂದ ದೇಶವ್ಯಾಪಿ ಇಂಟರ್ ನೆಟ್ ಸೇವೆ ಸ್ಥಗಿತಗೊಳಿಸಿದೆ.
ಕಳೆದ ಎರಡು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾನೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಅಲ್ಲದೇ ಆತ ಮೃತಪಟ್ಟಿದ್ದಾನೆ ಅಂತಾನೂ ಹೇಳಲಾಗುತ್ತಿದೆ. ಇದೆಲ್ಲದರ ಬಗ್ಗೆ ಸ್ಪಷ್ಟ ಹಾಗೂ ಅಧಿಕೃತ ಮಾಹಿತಿ ಹೊರಬರಬೇಕಿದೆ.