ಮೈಸೂರು ಡಿಸಿ ವರ್ಸಸ್ ಆಯುಕ್ತೆ: ರಾಜೀನಾಮೆಗೆ ಮುಂದಾದ ಅಧಿಕಾರಿ

220

ಪ್ರಜಾಸ್ತ್ರ ಸುದ್ದಿ

ಮೈಸೂರು: ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಮೈಸೂರು ಜಿಲ್ಲೆಯ ಅಧಿಕಾರಿಗಳು ಹಾಗೂ ರಾಜಕಾರಣಿಗಳು ಭಾರೀ ಚರ್ಚೆಯಲ್ಲಿದ್ದಾರೆ. ಅದರಲ್ಲೂ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಮಾತ್ರ ರಾಜಕಾರಣಿಗಳಿಗಿಂತ ಹೆಚ್ಚು ಪ್ರಚಾರದಲ್ಲಿದ್ದಾರೆ.

ಸಂಸದ ಪ್ರತಾಪ ಸಿಂಹ, ಜೆಡಿಎಸ್ ಶಾಸಕ ಸಾರಾ ಮಹೇಶ ಸೇರಿದಂತೆ ಅನೇಕರ ಜೊತೆ ಜಟಾಪಟಿ ನಡೆದಿದೆ. ಇದು ಅಲ್ದೇ, ಇನ್ನೋರ್ವ ಐಎಎಸ್ ಅಧಿಕಾರಿ, ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಹಾಗೂ ಡಿಸಿ ರೋಹಿಣಿ ಸಿಂಧೂರಿ ನಡುವೆ ಗುದ್ದಾಟ ನಡೆದಿದ್ದು, ಶಿಲ್ಪಾನಾಗ್ ರಾಜೀನಾಮೆ ನೀಡುವ ಬಗ್ಗೆ ಮಾತ್ನಾಡಿದ್ದಾರೆ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಕೆಲಸ ಮಾಡುವುದಕ್ಕೂ ಬಿಡುತ್ತಿಲ್ಲ. ಇಂತಹ ದುರಹಂಕಾರಿ ಅಧಿಕಾರಿ ಯಾರಿಗೂ ಬೇಡ. ಹೀಗಾಗಿ ನಾನು ರಾಜೀನಾಮೆ ನೀಡುವ ಸಂಬಂಧ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದೇನೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!