ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮಂಡ್ಯದಲ್ಲಿ ಸೋಮವಾರ ಬಿಜೆಪಿ-ಜೆಡಿಎಸ್ ಜೊತೆಯಾಗಿ ಪ್ರತಿಭಟನೆ ನಡೆಸಿವೆ. ಈ ವೇಳೆ ಹೆಚ್.ಡಿ ಕುಮಾರಸ್ವಾಮಿ ಶಾಲು ಹಾಕಿಕೊಂಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಇಂದು ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಬಿಜೆಪಿಯೊಂದಿಗೆ ಜೆಡಿಎಸ್ ಮರ್ಜ್ ಆಗಿದೆ. ಅವರು ಏನಾದರೂ ಮಾಡಿಕೊಳ್ಳಲಿ ಎಂದರು.
ಅವರು ಯಾವ ಬಣ್ಣದ ಬಾವುಟನಾದರೂ ಹಾಕಿಕೊಳ್ಳಲಿ. ಅವರನ್ನು ಇವರು ನುಂಗುತ್ತಾರೋ ಇವರೇ ಅವರನ್ನು ನುಂಗುತ್ತಾರೋ ಗೊತ್ತಿಲ್ಲ ಎನ್ನುವ ಮೂಲಕ ಹೆಚ್ಡಿಕೆಗೆ ಟಾಂಗ್ ಕೊಟ್ಟಿದ್ದಾರೆ.