ಪ್ರಜಾಸ್ತ್ರ ಸುದ್ದಿ
ಮೈಸೂರು: ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿ ಎಂಎಲ್ಸಿ ಆಗಿರುವ ಜಗದೀಶ್ ಶೆಟ್ಟರ್ ಅವರನ್ನು ವಾಪಸ್ ಕರೆಸಿಕೊಳ್ಳುವ ಯತ್ನ ನಡೆದಿದೆ ಎನ್ನಲಾಗುತ್ತಿದೆ. ಈ ಸಂಬಂಧ ಮಾತನಾಡಿರುವ ಡಿಸಿಎಂ ಡಿ.ಕೆ ಶಿವಕುಮಾರ್, ನಿಮ್ಮಲ್ಲಿ ಲೀಡರ್ಸ್ ಇಲ್ಲವೇ ಎಂದು ಬಿಜೆಪಿಯವರನ್ನು ಪ್ರಶ್ನಿಸಿದ್ದಾರೆ.
ಜಿಲ್ಲೆಯ ಪರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದೆ. ನಿಮ್ಮಲ್ಲಿ ಒಳ್ಳೆಯ ಅಭ್ಯರ್ಥಿಗಳಿದ್ದರೆ ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಿಕೊಳ್ಳಿ. ಯಡಿಯೂರಪ್ಪನವರನ್ನ ಕಣ್ಣೀರು ಹಾಕಿಸಿದ್ದು ಯಾರು? ಕುಮಾರಸ್ವಾಮಯವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದು ಯಾರು ಎಂದು ಪ್ರಶ್ನಿಸಿದರು. ಅಂದು ಮೈತ್ರಿ ಸರ್ಕಾರವನ್ನು ಕೆಡವಿದವರನ್ನೇ ಕುಮಾರಸ್ವಾಮಿ ತಬ್ಬಿಕೊಳ್ಳುತ್ತಿದ್ದಾರೆ. ಬಿಜೆಪಿ, ಜೆಡಿಎಸ್ ನಲ್ಲಿ ನಾಯಕತ್ವದ ಕೊರತೆ ಇದೆ ಅಂತಾ ಕಾಲೆಳೆದರು.