ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಇತ್ತೀಚಿನ ನೀಡಿದ ಹೇಳಿಕೆಯಿಂದ ಸಾಕಷ್ಟು ಸುದ್ದಿಯಲ್ಲಿರುವ ಕಾಂಗ್ರೆಸ್ ಎಂಎಲ್ಸಿ ಬಿ.ಕೆ ಹರಿಪ್ರಸಾದ್, ಮಂಗಳವಾರ ರಾತ್ರಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ದಿಢೀರ್ ಭೇಟಿ ಮಾಡಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ.
ಹೊಸ ಸರ್ಕಾರದ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಸಿಗದಕ್ಕೆ ಅಸಮಾಧಾನಗೊಂಡಿರುವ ಬಿಲ್ಲವ ಸಮಾಜದ ಮುಖಂಡ, ಎಂಎಲ್ಸಿ ಬಿ.ಕೆ ಹರಿಪ್ರಸಾದ್, ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಸಂಬಂಧ ಮಂಗಳವಾರ ರಾತ್ರಿ ಡಿಸಿಎಂ ಜೊತೆ ಸಮಾಲೋಚನೆ ನಡೆಸಲಾಗಿದೆ. ಪಕ್ಷದೊಳಗಿನ ಆಂತರಿಕ ವಿಚಾರಗಳ ಕುರಿತು ಚರ್ಚಿಸಿದ್ದಾರೆ. ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ಸಿಗುವ ಭರವಸೆಯೂ ಸಿಕ್ಕಿದೆ ಎನ್ನಲಾಗುತ್ತಿದೆ. ಈ ವೇಳೆ ಸಚಿವ ಕೆ.ಹೆಚ್ ಮುನಿಯಪ್ಪ, ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್ ಶಂಕರ್ ಉಪಸ್ಥಿತರಿದ್ದರು.
ಈಡಿಗ ಬಿಲ್ಲವ ಸಮಾಜದ ಕಾರ್ಯಕ್ರಮದಲ್ಲಿ ಮಾತನಾಡಿದ ಬಿ.ಕೆ ಹರಿಪ್ರಸಾದ್, ನನಗೆ ಸಿಎಂ ಮಾಡುವುದು ಗೊತ್ತು. ಕೆಳಗೆ ಇಳಿಸುವುದು ಗೊತ್ತು ಎಂದಿದ್ದರು. ಇದು ಭಾರೀ ಚರ್ಚೆಗೆ ಕಾರಣವಾಯಿತು. ನಂತರ ಸಾಮಾಜಿಕ ನ್ಯಾಯದ ಪರ ಧ್ವನಿ ಎತ್ತಿದ್ದೇನೆ. ನನಗೆ ಮಂತ್ರಿ, ಸಿಎಂ ಯಾವ ಸ್ಥಾನದ ಮೇಲೂ ಆಸೆ ಇಲ್ಲ ಎಂದು ಸೋಮವಾರ ಟ್ವೀಟ್ ಮಾಡಿದ್ದರು. ಹೀಗಾಗಿ ಡಿಸಿಎಂ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾಗುತ್ತಿದೆ.