17 ಜನರಲ್ಲಿ ಯಾರು ಕಾಂಗ್ರೆಸ್ಸಿಗೆ ಹೋಗ್ತಾರೆ ಗೊತ್ತಿಲ್ಲ: ಮುನಿರತ್ನ

232

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಆಪರೇಷನ್ ಹಸ್ತಕ್ಕೆ ಸಂಬಂಧಪಟ್ಟಂತೆ ದೊಡ್ಡ ಚರ್ಚೆ ನಡೆಯುತ್ತಿದೆ. ಈ ಕುರಿತು ಮಾತನಾಡಿರುವ ಬಿಜೆಪಿ ಮಾಜಿ ಸಚಿವ ಮುನಿರತ್ನ, 17 ಜನರಲ್ಲಿ ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಯಾರು ಹೋಗ್ತಾರೆ ಗೊತ್ತಿಲ್ಲ. ನಾನಂತೂ ಹೋಗುವುದಿಲ್ಲ. ಬೇಕಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ ಎಂದಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನನ್ನನ್ನು ಜೈಲಿನಲ್ಲಿ ಇಟ್ಟು ನನ್ನ ಕ್ಷೇತ್ರ ಅಭಿವೃದ್ಧಿ ಮಾಡಲಿ. ಯಾಕಂದರೆ ನನಗೆ ನನ್ನ ಆರ್ ಆರ್ ನಗರ ಅಭಿವೃದ್ಧಿಯಾಗಬೇಕಷ್ಟೇ. ನನಗೆ ಬಿಜೆಪಿಯಲ್ಲಿ ಇದುವರೆಗೂ ಯಾರೂ ಏಕವಚನದಿಂದ ಮಾತನಾಡಿಲ್ಲ. ಪಕ್ಷವನ್ನು ಗೌರವದಿಂದ ನೋಡ್ತೀನಿ ಎಂದರು.

ಕಾಂಗ್ರೆಸ್ ಗೆ ಯಾರು ಬಂದರೂ ಸ್ವಾಗತ. ಪಕ್ಷಕ್ಕೆ ಅವರನ್ನು ಸೇರಿಸಿಕೊಳ್ಳಬೇಕೋ ಬೇಡವೋ ಅನ್ನೋದು ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದು ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಹೇಳಿರುವುದು ಹೊಸ ಚರ್ಚೆಗೆ ಕಾರಣವಾಗಿದೆ.




Leave a Reply

Your email address will not be published. Required fields are marked *

error: Content is protected !!