ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಡಿಸಿಎಂ ಗೋವಿಂದ ಕಾರಜೋಳ ಅವರ ಮಗನಿಗೆ ತೀವ್ರ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ಕರೋನಾ ಸೋಂಕಿನಿಂದ ಬಳಲುತ್ತಿದ್ದ ಡಾ.ಗೋಪಾಲ ಕಾರಜೋಳ ಸ್ಥಿತಿ ಗಂಭೀರವಾಗಿದ್ದು, ತಮಿಳುನಾಡಿನ ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿದೆ.
ವೆಂಟಿಲೇಟರ್ ಸಹಾಯದಿಂದ ಅವರಿಗೆ ಚಿಕಿತ್ಸೆ ನೀಡಿದ್ರೂ ಗುಣಮುಖರಾಗಿಲ್ಲ. ಹೀಗಾಗಿ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಗೋಪಾಲ ಕಾರಜೋಳ ಅವರನ್ನ ಚೆನ್ನೈಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಇನ್ನು ಡಿಸಿಎಂ ಗೋವಿಂದ ಕಾರಜೋಳ ಸೇರಿದಂತೆ ಕುಟುಂಬಸ್ಥರಿಗೆ ಸೋಂಕು ತಗುಲಿತ್ತು. ಅವರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.