ಸಿಡಿ ಮಾಡಿಸುವುದ್ರಲ್ಲಿ ಸಿದ್ದರಾಮಯ್ಯ ಎಕ್ಸ್ಪರ್ಟ್: ಸವದಿ

366

ಹುಬ್ಬಳ್ಳಿ: ಸಿಡಿ ಮಾಡಿಸುವುದ್ರಲ್ಲಿ ಸಿದ್ದರಾಮಯ್ಯನವರು ಎಕ್ಸ್ಪರ್ಟ್ ಎಂದು ಡಿಸಿಎಂ ಲಕ್ಷ್ಮಣ ಸವದಿ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಎರಡು ಬಾರಿ ಸಿಡಿ ಮಾಡಿಸಿದ ಉದಾಹರಣೆ ಇದೆ. ಒಂದು ಬಾರಿ ಬಿಎಸ್ ವೈ ಜೊತೆ ಲಿಂಗಾಯತರಿಲ್ಲ ಅನ್ನೋ ಆಡಿಯೋ ಮಾಡಿಸಿದ್ರು. ಇನ್ನೊಂದು ಧರ್ಮಸ್ಥಳದಲ್ಲಿ ಲೋಕಸಭಾ ಚುನಾವಣೆ ನಂತರ ಮೈತ್ರಿ ಸರ್ಕಾರ ಬೀಳಲಿದೆ ಅನ್ನೋ ಸಿಡಿ ಮಾಡಿಸಿದ್ರು ಅಂತಾ ವಾಗ್ದಾಳಿ ನಡೆಸಿದ್ರು.

ಹುಬ್ಬಳ್ಳಿಯಲ್ಲಿ ಮಾತ್ನಾಡಿದ ಅವರು, ಸಿದ್ದರಾಮಯ್ಯನವರು ಸುಳ್ಳು ಹೇಳುವುದು ಬಿಡಲಿ. ಅನರ್ಹರ ಬಗ್ಗೆ ಹಗರುವಾಗಿ ಮಾತನಾಡಬಾರದೆಂದು ಬಿಎಸ್ ವೈ ಹೇಳಿದ್ದು ನಿಜ. ಬಿಎಸ್ ವೈ ಆಡಿಯೋವನ್ನ ತಿರುಚಿ ಬಿಡುಗಡೆ  ಮಾಡಲಾಗಿದೆ. ಬಿಜೆಪಿ ಸಭೆಯಲ್ಲಿ ಮೊಬೈಲ್ ಗಳಿಗೆ ಅವಕಾಶ ಇತ್ತು. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ್ ತನಿಖೆ ಮಾಡುತ್ತಿದ್ದಾರೆ ಅಂತಾ ಹೇಳಿದ್ರು.

ತನಿಖೆಯ ನಂತರ ಯಾರು ಮಾಡಿದ್ದು ಯಾಕೆ ಮಾಡಿದ್ರು ಅನ್ನೋದು ಬಯಲಿಗೆ ಬರಲಿದೆ. ಆಡಿಯೋಗೂ ಹೈಕಮಾಂಡಗೂ ಸಂಬಂಧವಿಲ್ಲ ಎಂದರು. ಹೈಕಮಾಂಡ್ ಸೂಚಿಸಿದ ಹಾಗೆ ಕೇಳುವ ವ್ಯಕ್ತಿ ನಾನು. ಹೈಕಮಾಂಡ್ ವಿಧಾನಸಭೆಗೆ ಸೂಚಿಸಿದ್ರೆ ವಿಧಾನಸಭೆ. ವಿಧಾನಪರಿಷತ್ ಗೆ ಸೂಚಿಸಿದ್ರೆ ವಿಧಾನಪರಿಷತ್ ಗೆ ಸ್ಪರ್ಧೆ ಮಾಡುವೆ. ನಾನು ಹೈಕಮಾಂಡ್ ಆದೇಶ ಪಾಲಿಸುವ ವ್ಯಕ್ತಿ ಎಂದು ಹೇಳಿದ್ರು.




Leave a Reply

Your email address will not be published. Required fields are marked *

error: Content is protected !!