ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಇಲ್ಲಿನ ಬಿಮ್ಸ್ ಆಸ್ಪತ್ರೆಗೆ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಶನಿವಾರ ಭೇಟಿ ನೀಡಿದ್ರು. ಕೋವಿಡ್ ವಾರ್ಡ್ ಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ಅಲ್ಲಿನ ವ್ಯವಸ್ಥೆ ಕಂಡು ಕೆಂಡಾಮಂಡಲರಾದ್ರು.
ಇಲ್ಲಿನ ವ್ಯವಸ್ಥೆ ದೇವರಿಗೆ ಪ್ರೀತಿ. ಈ ಹಿಂದೆ ಸಭೆ ನಡೆಸಿ ಆಸ್ಪತ್ರೆ ನಿರ್ದೇಶಕರಿಗೆ ಎಚ್ಚರಿಕೆ ನೀಡಲಾಗಿತ್ತು. ಆದ್ರೂ ಎಚ್ಚೆತ್ತುಕೊಂಡಿಲ್ಲ. ಇಂತಹ ದಪ್ಪ ಚರ್ಮದ ವೈದ್ಯರಗಳ ಬಗ್ಗೆ ಏನು ಹೇಳಬೇಕು ಗೊತ್ತಾಗುತ್ತಿಲ್ಲವೆಂದು ಕಿಡಿ ಕಾರಿದ್ದಾರೆ.