ಬೆಂಗಳೂರು: ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಆಗಿರುವ ಅಣ್ಣಾಮಲೈ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.
ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಮಾತ್ನಾಡಿದ್ದು, ಇಂದು ಸಂಜೆಯೊಳಗೆ ಎಲ್ಲವನ್ನು ಹೇಳುತ್ತೇನೆ ಅಂತಾ ಹೇಳಿದ್ದಾರೆ. ನನ್ನ ಬಗ್ಗೆ ಏನೇನೋ ಯೋಚನೆ ಮಾಡಬೇಡಿ. ಸ್ವಲ್ಪ ಸಮಾಧಾನದಿಂದ ಇರಿ ಅಂತಾ ಹೇಳಿದ್ದಾರೆ. ಇನ್ನು ತಮ್ಮ ರಾಜೀನಾಮೆ ಪತ್ರವನ್ನ ಗೃಹ ಇಲಾಖೆಯ ಕಾರ್ಯದರ್ಶಿಗೆ ಕಳುಹಿಸಲಿದ್ದಾರೆ ಎನ್ನಲಾಗ್ತಿದೆ.
ಇತ್ತೀಚಿಗೆ ನಡೆದ ಕೆಲ ಘಟನೆಗಳಿಂದ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ ಅಂತಾ ಹೇಳಲಾಗ್ತಿದೆ. ಒಟ್ಟಿನಲ್ಲಿ ಈಗಿರುವ ರಾಜೀನಾಮೆ ಪ್ರಶ್ನೆಗೆ ಇಂದು ಸಂಜೆಯೊಳಗೆ ಉತ್ತರ ಸಿಗಲಿದೆ.