ಪ್ರಜಾಸ್ತ್ರ ಸುದ್ದಿ
ಧಾರವಾಡ: ಕಳೆದ ರಾತ್ರಿ ಮನೆಯಿಂದ ಹೊರ ಹೋದ ವ್ಯಕ್ತಿ ಇದೀಗ ಚರಂಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಅಮ್ಮಿನಭಾವಿ ಗ್ರಾಮದ ಮಲ್ಲಿಕಾರ್ಜುನ ಗುಳೇದಕೊಪ್ಪ(45) ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿದ ವ್ಯಕ್ತಿ.
ಗ್ರಾಮದ ದೇವಿ ದೇವಸ್ಥಾನದ ಹತ್ತಿರದ ಚರಂಡಿಯಲ್ಲಿ ಅರೆನಗ್ನ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಇದರಿಂದಾಗಿ ಗ್ರಾಮದ ಜನರಲ್ಲಿ ಸಾಕಷ್ಟು ಪ್ರಶ್ನೆಗಳು ಮೂಡಿವೆ. ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.