ಪ್ರಜಾಸ್ತ್ರ ಸುದ್ದಿ
ಧಾರವಾಡ: ನಗರದ ಕೆಸಿಸಿ ಬ್ಯಾಂಕ್ ಪಕ್ಕದ ಹೋಟೆಲ್ ಎದುರು ಅನಾಥ ಶವವೊಂದು ಪತ್ತೆಯಾಗಿದೆ. ಸುಮಾರು 45 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಬೆಳಗ್ಗೆ ಹೋಟೆಲ್ ಮಾಲೀಕ ಬಂದಾಗ, ಈ ದೃಶ್ಯವನ್ನ ನೋಡಿದ್ದಾನೆ.
ಅಕ್ಕ ಪಕ್ಕದ ಅಂಗಡಿಯವರು ಕೂಡಲೇ ಜಿಲ್ಲಾಡಳಿತದ ಕಂಟ್ರೋಲ್ ರೂಂ ಸಿಬ್ಬಂದಿಗೆ ಸಹ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಆಂಬ್ಯುಲೆನ್ಸ್ ಸಿಬ್ಬಂದಿ, ಪಿಪಿಇ ಕಿಟ್ ಇಲ್ಲದ ಹಿನ್ನೆಲೆಯಲ್ಲಿ ಶವ ಸಾಗಿಸಲು ನಿರಾಕರಣೆ ಮಾಡಿದ್ರು.
ನಂತರ ಸ್ಥಳಕ್ಕೆ ಬಂದ ನಗರ ಠಾಣೆ ಪೊಲೀಸರು, ಪಾಲಿಕೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮೃತಪಟ್ಟ ವ್ಯಕ್ತಿಯ ಮೂಗಿನಿಂದ ರಕ್ತಸ್ರಾವ ಆಗಿದ್ದರಿಂದ, ಶವ ಸಾಗಿಸಲು ಹಿಂದೇಟು ಹಾಕಿದ್ದಾರೆ. ಇದ್ರಿಂದಾಗಿ ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.