ಕಾರಿನಲ್ಲಿ ಯುವಕನ ಮೃತದೇಹ ಪತ್ತೆ

197

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಳೆದ ನಾಲ್ಕು ದಿನಗಳಿಂದ ನಿಂತಿದ್ದ ಕಾರಿನಲ್ಲಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿದೆ. ಹೆನ್ನಾಗರ ಗೇಟ್ ಹತ್ತಿರ ನಿಂತಿದ್ದ ಕೆಎ 51 ಎಂಎಂ 9885 ನಂಬರಿನ ಕಾರಿನಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ.

ಬೆಂಗಳೂರಿನ ವೀರಭದ್ರನಗರದ ನಿವಾಸಿ ಚೇತನ್ ಕುಮಾರ್(35) ಎಂದು ಗುರುತಿಸಲಾಗಿದೆ. ತಿರುಪತಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಮನೆಯೊಂದ ಹೊರಟು ಮಾರ್ಗಮಧ್ಯದಲ್ಲೇ ಡ್ರೈವರ್ ಸೀಟ್ ನಲ್ಲಿ ಕುಳಿತಲ್ಲೇ ಮೃತಪಟ್ಟಿದ್ದು, ಹಲವು ಅನುಮಾನಗಳನ್ನು ಮೂಡಿಸಿದೆ.

ಕಾರಿನಿಂದ ಕೆಟ್ಟ ವಾಸನೆ ಬಂದಿದೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಾರು ಪರಿಶೀಲನೆ ನಡೆಸಿದಾಗ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹ ಕಳುಹಿಸಲಾಗಿದೆ. ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!