ಪ್ರಜಾಸ್ತ್ರ ಸುದ್ದಿ
ಧಾರವಾಡ: ಒಂದು ಸಣ್ಣ ವಿಚಾರ ಒಂದು ಜೀವವನ್ನು ಬಲಿ ಪಡೆದ ಘಟನೆ ನಗರದ ಪೆಂಡಾರ್ ಗಲ್ಲಿಯಲ್ಲಿ ನಡೆದಿದೆ. ಸಾಧಿಕ್ ಮೋತಿಲಾಲ್ ಬಿಡ್ನಾಳ್(40) ಮೃತಪೆಟ್ಟ ವ್ಯಕ್ತಿಯಾಗಿದ್ದಾನೆ.
ಇಲ್ಲಿನ ಕಲ್ಯಾಣ ಮಂಟಪದಲ್ಲಿ ಮದುವೆ ನಡೆಯುತಿತ್ತು. ಈ ವೇಳೆ ಕಳೆದರಾತ್ರಿ ಊಟದ ವಿಚಾರಕ್ಕೆ ಇಬ್ಬರ ನಡುವೆ ಜಗಳವಾಗಿದೆ. ಇದನ್ನು ಬಿಡಿಸಲು ಹೋದ ಸಾಧಿಕ್ ತಲೆಗೆ ಪೆಟ್ಟು ಬಿದ್ದಿದೆ. ಇತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾನಂತೆ. ಈ ಬಗ್ಗೆ ಶಹರ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.