ಒಂದೂವರೆ ತಿಂಗಳ ಹಿಂದೆ ಮದುವೆಯಾಗಿದ್ದವನು ಮಸಣ ಸೇರಿದ!

244

ಪ್ರಜಾಸ್ತ್ರ ಸುದ್ದಿ

ಮಂಡ್ಯ: ದಾಯಾದಿ ಕಲಹಕ್ಕೆ ಯುವಕನೊಬ್ಬ ಬಲಿಯಾಗಿದ್ದಾನೆ. ಮೂಡನಹಳ್ಳಿ ರಘು(29) ಎಂಬಾತ ಕಳೆದ ಒಂದೂವರೆ ತಿಂಗಳ ಹಿಂದೆ ಮದುವೆಯಾಗಿದ್ದ. ಬೆಂಗಳೂರಿನಲ್ಲಿ ಸ್ವಂತ ಕಾರು ಊಡಿಸಿಕೊಂಡು ಕೆಲಸ ಮಾಡುತ್ತಿದ್ದ. ಕೋವಿಡ್ ನಿಂದಾಗಿ ಸ್ವಗ್ರಾಮಕ್ಕೆ ಬಂದಿದ್ದ ರಘು ಮದುವೆ ಮಾಡಿಕೊಂಡಿದ್ದ.

ಗ್ರಾಮದಲ್ಲೇ ಉಳಿದುಕೊಂಡಿದ್ದ ರಘು ಸೆಪ್ಟೆಂಬರ್ 26ರಂದು ಬೆಂಗಳೂರಿಗೆ ಹೋಗಲು 25ರ ರಾತ್ರಿ ಕಾರು ಸ್ವಚ್ಛಗೊಳಿಸುತ್ತಿದ್ದಾಗ ಹಿಂದಿನಿಂದ ಯಾರೋ ಬಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದ. ರಘುನನ್ನು ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕಳೆದೊಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದ ರಘು ಗುರುವಾರ ಮೃತಪಟ್ಟಿದ್ದಾನೆ. ಆರೋಪಿ ಪತ್ತೆಗೆ ಕೆ.ಆರ್ ಪೇಟೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಮಗನನ್ನು ಕಳೆದುಕೊಂಡು ಕುಟುಂಬ ಒಂದು ಕಡೆ, ಒಂದೂವರೆ ತಿಂಗಳಲ್ಲೇ ಗಂಡನನ್ನು ಕಳೆದುಕೊಂಡ ಹೆಂಡ್ತಿ ಹಾಗೂ ಆಕೆ ಕುಟುಂಬ ಮತ್ತೊಂದ್ಕಡೆ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ.


TAG


Leave a Reply

Your email address will not be published. Required fields are marked *

error: Content is protected !!