ಪ್ರಜಾಸ್ತ್ರ ಸುದ್ದಿ
ಮಂಡ್ಯ: ಇತ್ತೀಚೆಗೆ ಬೆಂಗಳೂರಿನಲ್ಲಿ ರಸ್ತೆ ಮಧ್ಯ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಾಯಿ ಹಾಗೂ 9 ತಿಂಗಳ ಮಗು ಮೃತಪಟ್ಟ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ಮಂಡ್ಯದಲ್ಲಿ ನಡೆದಿದೆ.
ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದ ರೈತನೊಬ್ಬ ಮೃತಪಟ್ಟ ಘಟನೆ ಕೆ.ಆರ್ ಪೇಟೆ ತಾಲೂಕಿನ ಬೆಳತೂರು ಗ್ರಾಮದ ಹತ್ತಿರ ನಡೆದಿದೆ. ರವಿಕುಮಾರ್(43) ಮೃತ ದುರ್ದೈವಿ. ಮಧ್ಯಾಹ್ನ ತಮ್ಮ ಜಮೀನಿಗೆ ಹೋಗಿದ್ದರು. ಈ ವೇಳೆ ಟಿಸಿಯಿಂದ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಗಮನಿಸಿರಲಿಲ್ಲ. ಹೀಗಾಗಿ ಬದುವಿನ ಮೇಲೆ ಹೋದಾಗ ಶಾಕ್ ಹೊಡೆದು ಮೃತಪಟ್ಟಿದ್ದಾರೆ.
ರವಿಕುಮಾರ್ ಸಾವಿಗೆ ಚೆಸ್ಕಾಂ ಅಧಿಕಾರಿಗಳೇ ಕಾರಣವೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.