ತುಮಕೂರಲ್ಲಿ ಬಾಣಂತಿ, ಅವಳಿ ಮಕ್ಕಳ ದಾರುಣ ಸಾವು

282

ಪ್ರಜಾಸ್ತ್ರ ಸುದ್ದಿ

ತುಮಕೂರು: ಬಾಣಂತಿ ಹಾಗೂ ಅವಳಿ ಮಕ್ಕಳು ಮೃತಪಟ್ಟಿರುವ ದಾರುಣ ಘಟನೆ ನಗರದಲ್ಲಿ ನಡೆದಿದೆ. ಇದಕ್ಕೆ ಜಿಲ್ಲಾಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಹೇಳಲಾಗುತ್ತಿದೆ. ತಮಿಳುನಾಡು ಮೂಲದ ಕಸ್ತೂರಿ(30) ಅನ್ನೋ ಮಹಿಳೆ ಹಾಗೂ ಹಸುಕೂಸುಗಳು ಸಾವನ್ನಪ್ಪಿವೆ.

ನಗರದ ಆಂಜನೇಯ ದೇಗುಲದ ಹತ್ತಿರದ ಮಗಳೊಂದಿಗೆ ಕಸ್ತೂರಿ ಬಾಡಿಗೆ ಮನೆಯಲ್ಲಿ ನಲೆಸಿದ್ದಳು. ನಿನ್ನೆ ಸಂಜೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಸ್ಥಳೀಯರು ಆಟೋ ಮೂಲಕ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಗರ್ಭಿಣಿ ಬಳಿ ತಾಯಿ ಕಾರ್ಡ್, ಆಧಾರ್ ಕಾರ್ಡ್ ಇಲ್ಲ. ನಾವು ಚಿಕಿತ್ಸೆ ಕೊಡಲ್ಲ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂದು ಹೋಗಿ ಎಂದಿದ್ದಾರಂತೆ.

ಹಣವಿಲ್ಲದ ಕಸ್ತೂರಿ ಮನೆಗೆ ವಾಪಸ್ ಆಗಿದ್ದಾರೆ. ಇಂದು ಮುಂಜಾನೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮತ್ತೊಂದು ಮಗುವಿಗೆ ಜನ್ಮ ನೀಡುವಾಗ ತೀವ್ರ ರಕ್ತಸ್ರಾವವಾಗಿ ಕಸ್ತೂರಿ ಹಾಗೂ ಅವಳಿ ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಈ ದುರಂತಕ್ಕೆ ಜಿಲ್ಲಾಸ್ಪತ್ರೆಯ ವೈದ್ಯರೇ ಕಾರಣವೆಂದು ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!