ಪ್ರಜಾಸ್ತ್ರ ಸುದ್ದಿ
ಗದಗ: ನಟ ಯಶ್ ಹುಟ್ಟು ಹಬ್ಬದ ಹಿನ್ನಲೆಯಲ್ಲಿ ಲಕ್ಷ್ಮೇಶ್ವರ ತಾಲೂಕಿನ ಸೊರಣಗಿ ಗ್ರಾಮದಲ್ಲಿ ಅಭಿಮಾನಿಗಳು ಬೃಹತ್ ಕಟೌಟ್ ನಿಲ್ಲಿಸಲು ಹೋಗಿದ್ದಾರೆ. ಈ ವೇಳೆ ವಿದ್ಯುತ್ ತಗುಲಿ ಮೂವರು ಮೃತಪಟ್ಟಿದ್ದಾರೆ. ನಾಲ್ವರು ಗಾಯಗೊಂಡಿದ್ದಾರೆ.
ಘಟನೆ ಸಂಬಂಧ ಯಶ್ ಅಂದು ಗ್ರಾಮಕ್ಕೆ ಬಂದು ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವಾನ ಹೇಳಿದ್ದರು. ಇಂದು ಸಚಿವ ಹೆಚ್.ಕೆ ಪಾಟೀಲ ಮೃತ ಯುವಕರ ಕುಟುಂಬಸ್ಥರನ್ನು ಭೇಟಿಯಾಗಿ 2 ಲಕ್ಷ ರೂಪಾಯಿ ಪರಿಹಾರದ ಚಕ್ ನೀಡಿದರು. ಗಾಯಾಳುಗಳಿಗೆ 50 ಸಾವಿರ ರೂಪಾಯಿ ನೀಡಲಾಯಿತು.
ಮುರುಳಿ, ಹನಮಂತು, ನವೀನ್ ಅನ್ನೋ ಮೂವರು ಯವಕರು ಮೃತಪಟ್ಟಿದ್ದಾರೆ. ಸಚಿವರ ಭೇಟಿ ವೇಳೆ ಭೂ ಒಡೆತನ ಯೋಜನೆ ಅಡಿಯಲ್ಲಿ ಕುಟುಂಬಸ್ಥರು ಭೂಮಿ ನೀಡಲು ಗ್ರಾಮಸ್ಥರು ಮನವಿ ಸಲ್ಲಿಸಿದರು.