ಪ್ರಜಾಸ್ತ್ರ ಸುದ್ದಿ
ಮಂಡ್ಯ: ನಗರದ ಪೇಟೆ ಬೀದಿ ರೈಲ್ವೆ ಗೇಟ್ ಬಳಿ ದುರಂತವೊಂದು ಸಂಭವಿಸಿದೆ. ಫೋನ್ ನಲ್ಲಿ ಮಾತನಾಡುತ್ತಾ ರೈಲ್ವೆ ಹಳಿ ದಾಟುವ ಸಂದರ್ಭದಲ್ಲಿ ಬಂದ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ.
ಫೋನ್ ನಲ್ಲಿ ಮಾತನಾಡುತ್ತಾ ಹೋಗುತ್ತಿದ್ದ ಕಾರಣ ರೈಲು ಬರುವುದರ ಕಡೆ ಲಕ್ಷ ಕೊಡಲು ಆಗಿಲ್ಲ. ಇದರ ಪರಿಣಾಮ ಪ್ರಾಣ ಕಳೆದುಕೊಂಡಿದ್ದಾರೆ. ಮೃತರ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.