ಪ್ರಜಾಸ್ತ್ರ ಸುದ್ದಿ
ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣಿರಾಯಿ ವಿಜಯನ್ ಅವರಿಗೆ ಕೊಲೆ ಬೆದರಿಕೆ ಕರೆ ಬಂದಿದೆ. ಆದರೆ, ವಿಚಿತ್ರ ಅಂದರೆ ಕೊಲೆ ಬೆದರಿಕೆ ಕರೆ ಬಂದಿರುವುದು 7ನೇ ತರಗತಿ ಬಾಲಕನಿಂದ ಎನ್ನುವುದು.
ಪೊಲೀಸ್ ನಿಯಂತ್ರಣ ಕೊಠಡಿಗೆ ಕಾಲ್ ಮಾಡಿರುವ ಬಾಲಕ ಸಿಎಂಗೆ ಕೊಲೆ ಬೆದರಿಕೆ ಹಾಕಿದ್ದಾನೆ. ಪೊಲೀಸರು ಅದರ ಜಾಡು ಹಿಡಿದು ಮನೆಗೆ ಹೋಗಿ ವಿಚಾರಿಸಿದಾಗ, ಪೋಷಕರು ಇದರ ಬಗ್ಗೆ ನಮಗೆ ಏನೂ ಗೊತ್ತಿಲ್ಲ. ಫೋನ್ ನಲ್ಲಿ ಆಟವಾಡುವಾಗ ಕಾಲ್ ಹೋಗಿದೆ ಎನ್ನುತ್ತಿದ್ದಾರೆ. ಈ ಕುರಿತು ತನಿಖೆ ನಡೆಯುತ್ತಿದೆ.