ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಗೆ ಜೀವ ಬೆದರಿಕೆ

95

ಪ್ರಜಾಸ್ತ್ರ ಸುದ್ದಿ

ಮುಂಬೈ: ವಿವಾದಾತ್ಮಕ ಪೋಸ್ಟ್ ವಿಚಾರ ಸಂಬಂಧ ಮಹಾರಾಷ್ಟ್ರದಲ್ಲಿ ಕೆಲ ದಿನಗಳಿಂದ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ವಿಚಾರ ಸಂಬಂಧ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನೆಲ್ಲೇ ಅವರಿಗೆ ಜೀವ ಬೆದರಿಕೆ  ಹಾಕಲಾಗಿದೆ.

ನರೇಂದ್ರ ದಾಭೋಲ್ಕರ್ ರೀತಿಯಲ್ಲೇ ಭವಿಷ್ಯವನ್ನು ಶೀಘ್ರದಲ್ಲಿ ಎದುರಿಸುತ್ತೀರಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಬೆದರಿಕೆ ಹಾಕಲಾಗಿದೆ. ಈ ಘಟನೆ ಸಂಬಂಧ ಶರದ್ ಪವಾರ್ ಪುತ್ರಿ, ಸಂಸದೆ ಸುಪ್ರಿಯಾ ಸುಳೆ ಪೊಲೀಸ್ ದೂರು ದಾಖಲಿಸಿದ್ದಾರೆ.

ಇನ್ನು ಸಿಎಂ ಏಕನಾಥ್ ಶಿಂದೆ ಮಾತನಾಡಿ, ಪವಾರ್ ಅವರು ನಮ್ಮ ಹಿರಿಯ ಗೌರವಾನಿತ ನಾಯಕರು. ಅವರ ಭದ್ರತೆ ಕುರಿತು ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗುವುದು. ಅವಶ್ಯಕತೆ ಬಿದ್ದರೆ ಹೆಚ್ಚಿನ ಭದ್ರತೆ ನೀಡುವಂತೆ ಪೊಲೀಸರಿಗೆ ಸೂಚಿಸಿದ್ದೇನೆ. ಜೀವ ಬೆದರಿಕೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಸೂಕ್ತ ತನಿಖೆಗೆ ಸೂಚಿಸಿದ್ದೇನೆ ಅಂತಾ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!