ಡಿ.31ಕ್ಕೆ ಕರ್ನಾಟಕ ಬಂದ್ ಫಿಕ್ಸ್: ವಾಟಾಳ್ ನಾಗರಾಜ್

486

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಎಂಇಎಸ್ ವಿರುದ್ಧ ಕನ್ನಡ ಪರ ಸಂಘಟನೆಗಳು ಡಿಸೆಂಬರ್ 31ರಂದು ಬಂದ್ ಗೆ ಕರೆ ಕೊಟ್ಟಿದ್ದು, ಅದು ಬದಲಾಗುವುದಿಲ್ಲ. ಅಂದು ಬಂದ್ ನಡೆಯುವುದು ಫಿಕ್ಸ್ ಎಂದು ಕನ್ನಡ ಚಳವಳಿ ಪಕ್ಷದ ವಾಟಾಳ್ ನಾಗರಾಜ್ ಹೇಳಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಂದ್ ನಿಗದಿಯಾಗಿದೆ. ಅದರಲ್ಲಿ ಯಾವುದೇ ಬದಲಾವಣೆಯಿಲ್ಲ. ಡಿಸೆಂಬರ್ 31ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ತನಕ ಬಂದ್ ಇರಲಿದೆ. ಅಂದು ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುತ್ತೇವೆ. ನಂತರ ಎಂಇಎಸ್ ನಿಷೇಧಕ್ಕೆ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇವೆ ಎಂದರು.




Leave a Reply

Your email address will not be published. Required fields are marked *

error: Content is protected !!