ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಕನ್ನಡ ಪರ ಸಂಘಟನೆಗಳಿಂದ ಡಿಸೆಂಬರ್ 5 ಶನಿವಾರ ಕರ್ನಾಟಕ ಬಂದ್ ಆಚರಿಸಲಾಗ್ತಿದೆ. ಈ ಸಂಬಂಧ ರಾಜ್ಯದಲ್ಲಿ ಸೂಕ್ತ ಪೊಲೀಸ್ ಬಿಗಿ ಬಂದೋಬಸ್ತಿ ಮಾಡಲಾಗಿದೆ.
ಇದೀಗ ಕೃಷಿ ಮಸೂದೆ ವಿರೋಧಿಸಿ ಹೋರಾಟ ಮಾಡ್ತಿರುವ ರೈತರು, ಸರ್ಕಾರದೊಂದಗಿನ ಮಾತಕತೆ ವಿಫಲವಾಗಿದೆ. ಇದ್ರಿಂದಾಗಿ ಡಿಸೆಂಬರ್ 8ರಂದು ಭಾರತ ಬಂದ್ ಗೆ ಕರೆ ನೀಡಲಾಗಿದೆ. ರೈತರ ಹೋರಾಟವನ್ನ ಮುಂದಿನ ಹಂತಕ್ಕೆ ತೆಗೆದುಕೊಂಡು ಹೋಗುವ ನಿಟ್ಟಿನಲ್ಲಿ ಡಿಸೆಂಬರ್ 8ರಂದು ಭಾರತ ಬಂದ್ ಗೆ ಕರೆ ನೀಡಲಾಗಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ ಪ್ರಧಾನ ಕಾರ್ಯದರ್ಶಿ ಲಖೋವಾಲ್ ತಿಳಿಸಿದ್ದಾರೆ.