ಎಪಿಎಂಸಿ ಕಾಯ್ದೆ ಹಿಂಪಡೆಯಲು ನಿರ್ಧಾರ: ಸಚಿವ ಹೆಚ್.ಕೆ ಪಾಟೀಲ

111

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆಯನ್ನು ಹಿಂದಕ್ಕೆ ಪಡೆದು ಹಳೆ ಕಾಯ್ದೆಯನ್ನು ಜಾರಿಗೆ ತರಲು ಮುಂದಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಹೆಚ್.ಕೆ ಪಾಟೀಲ ತಿಳಿಸಿದ್ದಾರೆ. ಜುಲೈ 3ರಿಂದ ವಿಧಾನಸಭಾ ಅಧಿವೇಶನ ನಡೆಯಲಿದೆ. ಆಗ ಇದು ಚರ್ಚೆಗೆ ಬರಲಿದೆ ಎಂದರು.

ಹಿಂದೆ ಬಿಜೆಪಿ ಸರ್ಕಾರ ತರಾತುರಿಯಲ್ಲಿ ಜಾರಿಗೆ ತಂದ ಪರಿಣಾಮ ಎಪಿಎಂಸಿ ಹಮಾಲಿಗಳು ಸಹ ಕಷ್ಟ ಪಡುತ್ತಿದ್ದಾರೆ. ರೈತರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕೇಂದ್ರದಲ್ಲಿ ಈ ಕಾಯ್ದೆ ವಾಪಸ್ ಪಡೆದರೂ ರಾಜ್ಯದಲ್ಲಿ ಬಿಜೆಪಿ ವಾಪಸ್ ಪಡೆಯಲಿಲ್ಲ. ಹೀಗಾಗಿ ಎಪಿಎಂಸಿ ಹಿಂದಿನ ಕಾಯ್ದೆಯನ್ನು ಮೂಲ ಸ್ವರೂಪದಲ್ಲಿ ಉಳಿಸಿಕೊಳ್ಳುವ ಉದ್ದೇಶ ಹೊಂದಿದೆ ಅಂತಾ ಸಚಿವರು ತಿಳಿಸಿದರು.




Leave a Reply

Your email address will not be published. Required fields are marked *

error: Content is protected !!