ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ದೀಪಾವಳಿ ಹಬ್ಬ ಬಂದರೆ ಸಾಕು ಪಟಾಕಿಯ ಹಾವಳಿ ಶುರುವಾಗುತ್ತೆ. ಸರ್ಕಾರದ ನಿಯಮ, ಕಾನೂನುಗಳು ಏನೇ ಇದ್ದರೂ, ಜನರು ಕೇರ್ ಮಾಡಲ್ಲ. ಕಾರಣ, ಅದನ್ನು ನಿರ್ವಹಣೆ ಮಾಡುವಲ್ಲಿ ಎಡವುತ್ತಿರುವುದು. ಹೀಗಾಗಿ ಸೋಮವಾರ ಸಿಲಿಕಾನ್ ಸಿಟಿಯಲ್ಲಿ ಪಟಾಕಿ ಸಿಡಿತದಿಂದ 12 ಮಂದಿ ಗಾಯಗೊಂಡಿದ್ದಾರೆ.
ಅನ್ನಪೂರ್ಣೇಶ್ವರಿ ನಗರ, ಸರ್ಜಾಪುರ, ಚಾಮರಾಜಪೇಟೆ, ಮೈಸೂರು ರಸ್ತೆ, ಅವೆನ್ಯು ರಸ್ತೆ ಸೇರಿದಂತೆ ವಿವಿಧ ಕಡೆ ಮಹಿಳೆ ಸೇರಿದಂತೆ 12 ಜನರು ಗಾಯಗೊಂಡಿದ್ದಾರೆ. ಅವರನ್ನು ಮಿಂಟೋ ಆಸ್ಪತ್ರೆಗೆ ದಾಖಲಿಸಲಾಗಿದೆ.