ಪ್ರಜಾಸ್ತ್ರ ಸುದ್ದಿ
ಅಯೋಧ್ಯೆ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಇಲ್ಲಿನ ರಾಮ ಮಂದಿರಕ್ಕೆ ಭೇಟಿ ನೀಡಿದರು. ರಾಮಲಲ್ಲಾದಲ್ಲಿ ಪೂಜೆ ಸಲ್ಲಿಸಿ ಶ್ರೀರಾಮ ಮಂತ್ರ ಪಠಣ ಮಾಡಿದರು.
ಈ ವೇಳೆ ಮಾತನಾಡಿದ ಕೇಜ್ರಿವಾಲ್, ದೇಶದ ಕೋವಿಡ್ 19ನಿಂದ ಮುಕ್ತವಾಗಬೇಕು. ಎಲ್ಲರೂ ಸಾಮರಸ್ಯದಿಂದ ಬದುಕಬೇಕು ಎಂದು ದೇವರಲ್ಲಿ ಪ್ರಾರ್ಥಿಸಿಕೊಂಡಿದ್ದೇನೆ ಎಂದರು. ಹಿರಿಯ ನಾಗರಿಕರಿಗೆ ಉಚಿತ ತೀರ್ಥಯಾತ್ರೆಗಳಲ್ಲಿ ಅಯೋಧ್ಯೆಯು ಇದೆ. ಈ ವಿಷಯವಾಗಿ ನಾಳೆ ವಿಶೇಷ ಸಚಿವ ಸಂಪುಟ ಸಭೆ ಕರೆದು ತೀರ್ಮಾನ ಮಾಡುತ್ತೇನೆ ಎಂದರು.