ಪ್ರಜಾಸ್ತ್ರ ಸುದ್ದಿ
ಸಿಂದಗಿ: ಇತ್ತೀಚಿಗೆ ದೆಹಲಿಯಲ್ಲಿ ಸಾಬಿಯಾ ಎನ್ನುವ ಮಹಿಳಾ ಪೊಲೀಸ್ ಪೇದೆಯ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಲಾಗಿದೆ.ಇದನ್ನು ಖಂಡಿಸಿ ಸಿಂದಗಿಯಲ್ಲಿ ಬುಧವಾರ ರಾತ್ರಿ ಪ್ರತಿಭಟನೆ ನಡೆಸಲಾಗಿದೆ.
ಟಿಪ್ಪು ಸುಲ್ತಾನ್ ಜಿಲ್ಲಾ ಸೇವಾ ಸಮಿತಿ ಹಾಗೂ ಕಾಂಗ್ರೆಸ್ ಮುಖಂಡರ ನೇತೃತ್ವದಲ್ಲಿ ಸಿಂದಗಿ ಪಟ್ಟಣದಲ್ಲಿ ಮೇಣದ ಬತ್ತಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗಿದೆ.
ಈ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ,ಪದೆಪದೆ ಇಂತಹ ಕೃತ್ಯಗಳು ನಡೆಯುತ್ತಿರುವುದು ಆತಂಕದ ಸಂಗತಿ ಎಂದರು. ಈ ವೇಳೆ ಮೈಬೂಬ್ ಸಿಂದಗ್ಕಿರ್, ಹಾಸೀಂ ಆಳಂದ ಸೇರಿ ಅನೇಕು ಭಾಗವಹಿಸಿದ್ದರು.