ಬ್ರೇಕಿಂಗ್ ನ್ಯೂಸ್
Search

ಶಾ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯ.. ಶಾಂತಿ ಸ್ಥಾಪನೆಗೆ ಪ್ರಧಾನಿ ಮನವಿ

346

ನವದೆಹಲಿ: ರಾಷ್ಟ್ರ ರಾಜಧಾನಿಯ ಹಿಂಸಾಚಾರ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ ಶಾ, ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಲಿ ಎಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.

ಮಾಧ್ಯಮಗೋಷ್ಠಿ ನಡೆಸಿ ಮಾತ್ನಾಡಿದ ಅವರು, ದೆಹಲಿ ಹಿಂಸಾಚಾರ ಯೋಜಿತ ಪಿತೂರಿ. 72 ಗಂಟೆಯಲ್ಲಿ ಪೊಲೀಸ್ರು ಪಾರ್ಶ್ಚವಾಯುವಿಗೆ ಒಳಾಗಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಇಷ್ಟೆಲ್ಲ ಗಲಭೆ ನಡೆಯುತ್ತಿದ್ರೂ ಕೇಂದ್ರ ಗೃಹ ಸಚಿವರು ಎಲ್ಲಿದ್ದರು ಎಂದು ಪ್ರಶ್ನಿಸಿದ್ದಾರೆ.

ಹಿಂಸಾಚಾರಕ್ಕೆ ಕೇಂದ್ರದ ನಿಷ್ಕಾಳಜಿಯೇ ಕಾರಣ. ಇದನ್ನ ಸರ್ಕಾರ ತಿಳಿದುಕೊಳ್ಳಬೇಕಾಗಿದೆ. ಘಟನೆಯ ನೈತಿಕ ಹೊಣೆಯನ್ನ ಕೇಂದ್ರ ಗೃಹ ಸಚಿವರು ಹೊತ್ತುಕೊಂಡು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಇನ್ನು ಇತ್ತ ಪ್ರಧಾನಿ ನರೇಂದ್ರ ಮೋದಿ, ಟ್ವೀಟ್ ಮೂಲಕ ಶಾಂತಿ ಕಾಪಾಡುವಂತೆ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. ನನ್ನ ಸಹೋದರಿ, ಸಹೋದರರಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ದೆಹಲಿಯಲ್ಲಿ ಶಾಂತಿ ಮತ್ತು ಸಹೋದರತ್ವವನ್ನ ಕಾಪಾಡಿ ಎಂದು ಕೇಳಿಕೊಂಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!