ದೆಹಲಿ ಅಪಘಾತ ಪ್ರಕರಣ: ಇಂದು ಸಂಜೆಯೊಳಗೆ ಕೇಂದ್ರಕ್ಕೆ ವರದಿ

290

ಪ್ರಜಾಸ್ತ್ರ ಸುದ್ದಿ

ನವದೆಹಲಿ: ದೆಹಲಿಯ ಸುಲ್ತಾನಪುರಿಯಲ್ಲಿ ಭಾನುವಾರ ಸಂಭವಿಸಿದ ಅಪಘಾತದಲ್ಲಿ ಯುವತಿಯೊಬ್ಬರಳ ಮೃತದೇಹ 12 ಕಿಲೋ ಮೀಟರ್ ವರೆಗೂ ಕಾರಿನಲ್ಲಿ ಎಳೆದುಕೊಂಡು ಹೋಗಲಾಗಿದೆ. ಈ ಪ್ರಕರಣ ಸಂಬಂಧ ಇಂದು ಸಂಜೆಯೊಳಗೆ ಕೇಂದ್ರಕ್ಕೆ ವರದಿ ಸಲ್ಲಿಸಬೇಕಿದೆ.

ಆರ್ಥಿಕ ಅಪರಾಧ ವಿಭಾಗದ ದೆಹಲಿ ಪೊಲೀಸ್ ನ ವಿಶೇಷ ಆಯುಕ್ತರಾಗಿರುವ ಶಾಲಿನಿ ಸಿಂಗ್ ಅವರಿಗೆ ಈ ಪ್ರಕರಣದ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಇವರೊಂದಿಗೆ ಉಪ ಪೊಲೀಸ್ ಆಯುಕ್ತ ಜಿತೇಂದ್ರ ಕುಮಾರ್ ಮೀನಾ ಹಾಗೂ ಸಿಬ್ಬಂದಿ ಇರಲಿದ್ದಾರೆ. ಈಗಾಗ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪೊಲೀಸ್ ಆಯುಕ್ತ ಸಂಜಯ್ ಅರೋರಾ ಅವರಿಂದ ಮಾಹಿತಿ ಪಡೆದಿದ್ದಾರೆ.

ಈ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಅಪಘಾತದ ಸಂದರ್ಭದಲ್ಲಿ ಮೃತ ಯುವತಿ ಜೊತೆಗೆ ಇನ್ನೊಬ್ಬಳು ಇದ್ದಳು ಎಂದು ಹೇಳಲಾಗುತ್ತಿದೆ. ಶನಿವಾರ ರಾತ್ರಿ ಗಳೆತಿಯೊಬ್ಬರ ಹುಟ್ಟು ಹಬ್ಬದ ಪಾರ್ಟಿಗೆ ಹೋಗಿದ್ದಾರೆ. ಭಾನುವಾರ ಮುಂಜಾನೆ ಬರುವಾಗ ಸ್ಕೂಟಿಯಲ್ಲಿ ಇಬ್ಬರು ಬಂದಿದ್ದಾರೆ. ಅಪಘಾತ ಸಂಭವಿಸಿದ ವೇಳೆ ಮತ್ತೊಬ್ಬಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಭಯದಿಂದ ಆಕೆ ಪರಾರಿಯಾಗಿದ್ದಾಳೆ ಎನ್ನಲಾಗುತ್ತಿದೆ.

ಈ ಪ್ರಕರಣ ಸಂಬಂಧ ಈಗಾಗ್ಲೇ ಐವರನ್ನು ಬಂಧಿಸಿದ್ದು ವಿಚಾರಣೆ ನಡೆಸಲಾಗುತ್ತಿದೆ. ಈ ಘಟನೆ ಸಾಕಷ್ಟು ಅನುಮಾನದಿಂದ ಕೂಡಿದೆ. ಯುವತಿ ಶವ ರಸ್ತೆಯಲ್ಲಿ ಬಿದ್ದಾಗ ಆಕೆ ಮೈಮೇಲೆ ಬಟ್ಟೆ ಇರಲಿಲ್ಲ. ಇದರ ಹಿಂದೆ ಬೇರೆಯವರ ಕೈವಾಡವಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮಂಗಳವಾರ ಸಂಜೆಯೊಳಗೆ ತನಿಖೆಯ ವರದಿಯನ್ನು ಗೃಹ ಇಲಾಖೆಗೆ ಸಲ್ಲಿಸಬೇಕಿದೆ.




Leave a Reply

Your email address will not be published. Required fields are marked *

error: Content is protected !!