ಪ್ರಜಾಸ್ತ್ರ ಸುದ್ದಿ
ದೇವರ ಹಿಪ್ಪರಗಿ: ಪಶು ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದಾಗಿ ಜ್ವರದಿಂದ ಬಳಲುತ್ತಿದ್ದ ಅಬ್ದುಲ್ ಅಜೀಜ್ ಅಮೀನಸಾಬ ಯಲಗಾರ ಎಂಬುವರಿಗೆ ಸೇರಿದ ಎಮ್ಮೆ ಮೃತಪಟ್ಟಿದೆ ಎಂದು ಆರೋಪಿಸಿ, ಕರ್ನಾಟಕ ರಾಜ್ಯ ರೈತ ಸಂಘದಿಂದ ಮನವಿ ಸಲ್ಲಿಸಲಾಗಿದೆ.
ಎಮ್ಮೆ ಕಳೆದಕೊಂಡ ರೈತನಿಗೆ ಪರಿಹಾರ ನೀಡಬೇಕು. ಕರ್ತವ್ಯಕ್ಕೆ ಗೈರು ಹಾಜರಾಗುತ್ತಿರುವ ಜಾನುವಾರು ಅಧಿಕಾರಿ ಅನಿಲ ಶಂಕ್ರಪ್ಪ ಕಕ್ಕಳಮೇಲಿ ಹಾಗೂ ಚಿಕ್ಕರೂಗಿಯಲ್ಲಿ ಪಶು ವೈದ್ಯಕೀಯ ಪರೀಕ್ಷಕರಾಗಿ ಕೆಲಸ ಮಾಡುತ್ತಿರುವ ನಾಗೇಂದ್ರ ಹರಸೂರ ರೈತರಿಂದ ಹಣ ಪಡೆಯುತ್ತಿರುವ ಆರೋಪ ಕೇಳಿ ಬಂದಿದೆ. ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಜಿಲ್ಲಾ ಉಪನಿರ್ದೇಶಕರು ಪಶುಪಾಲನೆ ಮತ್ತು ಪಶುವೈದ್ಯಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಗಿದೆ.