ಸಂಶೋಧನಾ ಪ್ರಬಂಧ ಅಂಗೀಕಾರಕ್ಕೆ ಲಂಚ: ಪ್ರಾಧ್ಯಾಪಕಿಗೆ ಜೈಲು ಶಿಕ್ಷೆ

192

ಪ್ರಜಾಸ್ತ್ರ ಸುದ್ದಿ

ಮಂಗಳೂರು: ಸಂಶೋಧನಾ ಪ್ರಬಂಧ ಅಂಗೀಕಾರಕ್ಕಾಗಿ ಲಂಚ ಬೇಡಿಕೆ ಇಟ್ಟಿದ್ದ ಪ್ರಕರಣ ಸಂಬಂಧ, ಮಂಗಳೂರು ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಅನಿತಾ ರವಿಶಂಕರ ಅವರಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯ ಈ ತೀರ್ಪು ನೀಡಿದೆ. ಡಿಸೆಂಬರ್ 4, 2012ರಲ್ಲಿ ಸಂಶೋಧನಾ ವಿದ್ಯಾರ್ಥಿನಿ ಪ್ರೇಮ ಡಿಸೋಜಾ ಅನ್ನೋ ವಿದ್ಯಾರ್ಥಿಗೆ 16,800 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕುರಿತು ಲೋಕಾಯುಕ್ತ ಪೊಲೀಸರ ಗಮನಕ್ಕೆ ವಿದ್ಯಾರ್ಥಿನಿ ತಂದಿದ್ಳು.

ಸುದೀರ್ಘ 10 ವರ್ಷಗಳ ಕಾಲ ನಡೆದ ವಿಚಾರಣೆ ಬಳಿಕ ಪ್ರಾಧ್ಯಾಪಕಿಗೆ 5 ವರ್ಷ ಜೈಲು ಶಿಕ್ಷೆ ಜೊತೆಗೆ 15 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಲೋಕಾಯುಕ್ತ ಸಂಸ್ಥೆ ಪರವಾಗಿ 9 ಜನರನ್ನ ವಿಚಾರಣೆಗೆ ಒಳಪಡಿಸಲಾಗಿತ್ತು.




Leave a Reply

Your email address will not be published. Required fields are marked *

error: Content is protected !!