ಹೆಚ್ಚಿನ ಡಿಸಿಎಂ ಬೇಡಿಕೆ ಇದ್ದೇ ಇದೆ: ಸಚಿವ ಜಾರಕಿಹೊಳಿ

168

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ರಾಜ್ಯದಲ್ಲಿ ಮತ್ತಷ್ಟು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸಬೇಕು ಎನ್ನುವ ಕೂಗು ಕಳೆದ ಹಲವು ದಿನಗಳಿಂದ ಕೇಳಿ ಬರುತ್ತಲೇ ಇದೆ. ಹಲವು ಸಚಿವರು ಬಹಿರಂಗವಾಗಿ ಹೇಳುತ್ತಲೇ ಇದ್ದಾರೆ. ಈ ಬಗ್ಗೆ ನಗರದಲ್ಲಿಂದು ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ವಿವಿಧ ಸಮುದಾಯಗಳಿಗೆ ಸಮಾನ ನ್ಯಾಯ ಸಿಗುವ ನಿಟ್ಟಿನಲ್ಲಿ ಹೆಚ್ಚಿನ ಡಿಸಿಎಂ ಸೃಷ್ಟಿಸಬೇಕು ಎನ್ನುವ ಬೇಡಿಕೆ ಇದ್ದೇ ಇದೆ ಎಂದಿದ್ದಾರೆ.

ಲೋಕಸಭೆ ಚುನಾವಣೆ ಬಳಿಕ ಈ ವಿಚಾರ ಮತ್ತೆ ಮುನ್ನಲೆಗೆ ಬರುತ್ತದೆ. ಈಗ ಸಧ್ಯಕ್ಕೆ ಹಿಂದಕ್ಕೆ ಸರಿದಿದೆ. ಕೆಲವರು ತಮ್ಮ ನಿಷ್ಠೆಯನ್ನು ತೋರಿಸುತ್ತಿದ್ದಾರೆ. ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ಧ್ರುವೀಕರಣ ನಡೆದಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!