ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ದೆಹಲಿಯ ಕೆಂಪುಕೋಟೆಯ ಮೇಲೆ ಮುಂದೆ ಕೇಸರಿ ಧ್ವಜ ಹಾರಿಸಬಹುದು ಎಂದು ಹೇಳಿಕೆ ನೀಡಿದ್ದ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಕಾಂಗ್ರೆಸ್, ಸದನದಲ್ಲಿ ವಾಗ್ದಾಳಿ ನಡೆಸಿದೆ. ಅಲ್ದೇ, ದೇಶದ್ರೋಹದ ಕೇಸ್ ದಾಖಲಿಸಲು ಮುಂದಾಗಿದೆ.
ಸಚಿವ ಈಶ್ವರಪ್ಪ ವಿರುದ್ಧ ನಿಲುವಳಿ ಸೂಚನೆ ಮಂಡಿಸಲು ಕಾಂಗ್ರೆಸ್ ಸಿದ್ಧವಾಗಿದೆ. ಇದಕ್ಕೆ ಅವಕಾಶ ನೀಡದೆ ಹೋದರೆ ಅಹೋರಾತ್ರಿ ಧರಣಿ ನಡೆಸಲು ಕಾಂಗ್ರೆಸ್ ಮುಂದಾಗಿದೆ. ಈಶ್ವರಪ್ಪರನ್ನು ಸಚಿವ ಸಂಪುಟದಿಂದ ಕೈ ಬಿಡಬೇಕು ಹಾಗೂ ದೇಶದ್ರೋಹದ ಕೇಸ್ ದಾಖಲಿಸಬೇಕು ಎಂದು ಒತ್ತಾಯಿಸಿದೆ.
ಈಶ್ವರಪ್ಪ ಹೇಳಿಕೆ, ರಾಷ್ಟ್ರದ ಐಕ್ಯತೆ ಮತ್ತು ಸಾರ್ವಭೌಮತೆಯ ಮೇಲಿನ ದಾಳಿಯಾಗಿದೆ. ದ ಪ್ರಿವೆಕ್ಷನ್ ಆಫ್ ಇನ್ ಸಲ್ಟ್ ಟು ನ್ಯಾಷನಲ್ ಹಾನರ್ ಕಾಯ್ದೆ 1971ರ ಸ್ಪಷ್ಟ ಉಲ್ಲಂಘನೆಯಾಗಿದೆ. ಹೀಗಿದ್ದರೂ ಸರ್ಕಾರ ಅವರ ವಿರುದ್ಧ ಕ್ರಮ ತೆಗೆದುಕೊಂಡಿಲ್ಲವೆಂದು ಆಕ್ರೋಶ ಹೊರ ಹಾಕಿದ್ದಾರೆ.