ನೋಟು ಅಮಾನ್ಯೀಕರಣದ ಬಗ್ಗೆ ನಾಳೆ ವಿಚಾರಣೆ

175

ಪ್ರಜಾಸ್ತ್ರ ಸುದ್ದಿ

ನವದೆಹಲಿ: ನೋಟು ಅಮಾನ್ಯೀಕರಣಕ್ಕೆ ಸಂಬಂಧಿಸಿದಂತೆ 6 ವರ್ಷಗಳ ನಂತರ ಸುಪ್ರೀಂ ಕೋರ್ಟ್ ನಲ್ಲಿ ಐವರು ನ್ಯಾಯಾಧೀಶರ ಪೀಠದಲ್ಲಿ ಬುಧವಾರ ವಿಚಾರಣೆ ನಡೆಯಲಿದೆ. ನೋಟು ಅಮಾನ್ಯಗೊಳಿಸಿದ ಬಗ್ಗೆ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಯಲಿದೆ.

2016ರಲ್ಲಿ 500 ಹಾಗೂ ಸಾವಿರ ರೂಪಾಯಿ ನೋಟು ಅಮಾನ್ಯೀಕರಣಕ್ಕೆ ಸಂಬಂಧಿಸಿದ ವಿರುದ್ಧ ಹಲವಾರು ಅರ್ಜಿಗಳನ್ನು ಸಲ್ಲಿಸಲಾಗಿದೆ. ಅಂದಿನ ಮುಖ್ಯ ನ್ಯಾಯಮೂರ್ತಿ ಟಿ.ಎಸ್ ಠಾಕೂರ್, ನಾವು ಆರ್ಥಿಕ ನೀತಿಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಈ ಯೋಜನೆಯ ಹಿಂದಿರುವ ಸರ್ಕಾರದ ಉದ್ದೇಶ ಶ್ಲಾಘನೀಯ ಎಂದಿದ್ದರು.

ಸುಪ್ರೀಂ ಕೋರ್ಟಿನ ಸಾಂವಿಧಾನಿಕ ಪೀಠವು ಸಿಂಧುತ್ವವನ್ನು ಆಲಿಸಲಿದೆ. ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಅವರ ಅಧ್ಯಕ್ಷತೆಯಲ್ಲಿ ಐವರು ನ್ಯಾಯಾಧೀಶರ ಪೀಠ ರಚಿಸಲಾಗಿದೆ. ವಿವರವಾದ ವಿಚಾರಣೆ ಸೆಪ್ಟೆಂಬರ್ 28ರಂದು ನಡೆಯಲಿದೆ.




Leave a Reply

Your email address will not be published. Required fields are marked *

error: Content is protected !!