ಪ್ರಜಾಸ್ತ್ರ ಅಪರಾಧ ಸುದ್ದಿ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕಿಯನ್ನು ಚಾಕುವಿನಿಂದ ಚುಚ್ಚಿ ಕೊಲೆ ಮಾಡಲಾಗಿದೆ. ದೊಡ್ಡಕಲ್ಲಸಂದ್ರದ ಗೋಕುಲ ಅಪಾರ್ಟ್ ಮೆಂಟ್ ನಲ್ಲಿ ಶನಿವಾರ ತಡರಾತ್ರಿ ಕೊಲೆ ನಡೆದಿದೆ.
ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಪ್ರತಿಮಾ(37) ಕೊಲೆಯಾದವರು. ಪತಿಯಿಂದ ದೂರವಾಗಿದ್ದ ಪ್ರತಿಮಾ ಒಂಟಿಯಾಗಿ ವಾಸವಾಗಿದ್ದರು. ಪತಿ ಹಾಗೂ ಮಗ ತೀರ್ಥಹಳ್ಳಿಯಲ್ಲಿ ವಾಸವಾಗಿದ್ದಾರೆ ಎನ್ನಲಾಗುತ್ತಿದೆ.
ಕಳೆದ ರಾತ್ರಿ ಕಾರು ಚಾಲಕ ರಾತ್ರಿ 8 ಗಂಟೆ ಸುಮಾರಿಗೆ ಮನೆಗೆ ಡ್ರಾಪ್ ಮಾಡಿ ಹೋಗಿದ್ದಾನೆ. ತಡರಾತ್ರಿ ಮನೆಗೆ ನುಗ್ಗಿದ ಹಂತಕರು ಈ ಕೃತ್ಯವೆಸಗಿದ್ದಾರೆ. ಇದು ಗೊತ್ತಿದ್ದವರಿಂದಲೇ ಆಗಿರುವ ಶಂಕೆ ವ್ಯಕ್ತವಾಗಿದೆ. ಯಾಕಂದರೆ, ಮನೆಯಲ್ಲಿ ಯಾವುದೇ ರೀತಿಯ ವಸ್ತುಗಳ ಕಳ್ಳತನವಾಗಿಲ್ಲ. ಪ್ರತಿಮಾ ಸಹೋದರ ಕಾಲ್ ಮಾಡಿದಾಗ ಅವರ ರಿಸೀವ್ ಮಾಡಿಲ್ಲ. ಹೀಗಾಗಿ ಬೆಳಗ್ಗೆ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.