ನ.5ರಂದು ದೇಸಿ ಸನ್ಮಾನ ಪ್ರಶಸ್ತಿ ಸಮಾರಂಭ

215

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಪಟ್ಟಣದ ನೆಲೆ ಪ್ರಕಾಶನ ಸಂಸ್ಥೆ, ಎಂ.ಎಂ. ಪಡಶೆಟ್ಟಿ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ನೀಡುವ ದೇಸಿ ಸನ್ಮಾನ ಪ್ರಶಸ್ತಿ ಕಾರ್ಯಕ್ರಮ ನವೆಂಬರ್ 5ರಂದು, ಭೀಮಾ ಯುನಿವರ್ಸಲ್ ಸೆಂಟ್ರಲ್ ಸ್ಕೂಲ್ ನಲ್ಲಿ ಮುಂಜಾನೆ 10.30ಕ್ಕೆ ನಡೆಯಲಿದೆ ಎಂದು ಪ್ರತಿಷ್ಠಾನದ ಸಂಚಾಲಕ, ಹಿರಿಯ ಕಥೆಗಾರ ಡಾ.ಚನ್ನಪ್ಪ ಕಟ್ಟಿ ತಿಳಿಸಿದ್ದಾರೆ.

ಇಲ್ಲಿನ ಸಂಗಮೇಶ್ವರ ವಿದ್ಯಾಲಯದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ವರ್ಷ ಹೊನ್ನಾವರದ ಹಿರಿಯ ಜಾನಪದ ವಿದ್ವಾಂಸರಾದ ಶಾಂತಿ ನಾಯಕ ಅವರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿ ಫಲಕ, 10 ಸಾವಿರ ರೂಪಾಯಿ ನಗದು ಒಳಗೊಂಡಿದೆ. ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ ತುಳಸಿಮಾಲಾ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಶಾಂತಿ ನಾಯಕ ಬದುಕು-ಬರಹ ಕೃತಿಯನ್ನು ಶಾಸಕ ಅಶೋಕ ಮನಗೂಳಿ ಬಿಡುಗಡೆಗೊಳಿಸಲಿದ್ದಾರೆ. ವಿಶ್ರಾಂತ ಪ್ರಾಧ್ಯಾಪಕ ಡಾ.ಜೆ.ಜಿ ಜೋಶಿ ಕೃತಿ ಪರಿಚಯ ಮಾಡಲಿದ್ದಾರೆ. ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಸಾನ್ನಿಧ್ಯ ವಹಿಸಿಕೊಳ್ಳಲಿದ್ದಾರೆ. ಭೀಮಾ ಯುನಿವರ್ಸಲ್ ಸೆಂಟ್ರಲ್ ಸ್ಕೂಲ್‌ನ ಅಧ್ಯಕ್ಷ ವಿಠ್ಠಲ ಕೊಳ್ಳೂರ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.




Leave a Reply

Your email address will not be published. Required fields are marked *

error: Content is protected !!