ನ.6ರಂದು ದೇಸಿ ಸನ್ಮಾನ ಪ್ರಶಸ್ತಿ ಪ್ರದಾನ ಸಮಾರಂಭ

292

ಪ್ರಜಾಸ್ತ್ರ ಸಾಹಿತ್ಯ ಮತ್ತು ರಂಗಭೂಮಿ

ಸಿಂದಗಿ: ಹಿರಿಯ ಜಾನಪದ ವಿದ್ವಾಂಸ ಡಾ.ಎಂ.ಎಂ ಪಡಶೆಟ್ಟಿ ಅವರ ಹೆಸರಿನ ಎಂ.ಎಂ ಪಡಶೆಟ್ಟಿ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ನೆಲೆ ಪ್ರಕಾಶನ ಸಂಸ್ಥೆ ವತಿಯಿಂದ ಪ್ರತಿ ವರ್ಷ ನೀಡುವ ‘ದೇಸಿ ಸನ್ಮಾನ’ ಪ್ರಶಸ್ತಿ ಈ ಬಾರಿ ಹಿರಿಯ ಜಾನಪದ ವಿದ್ವಾಂಸ ಡಾ.ವೀರಣ್ಣ ದಂಡೆ ಅವರಿಗೆ ನೀಡಲಾಗುತ್ತಿದೆ. ನವೆಂಬರ್ 6 ಭಾನುವಾರ ಪಟ್ಟಣದ ಮಾಂಗಲ್ಯ ಭವನದಲ್ಲಿ ಬೆಳಗ್ಗೆ 10ಗಂಟೆಗೆ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಸಮಾರಂಭದ ಸಾನಿಧ್ಯ ವಹಿಸಿಕೊಳ್ಳಲಿರುವ ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಹಿರಿಯ ಕಥೆಗಾರ ಡಾ.ಚನ್ನಪ್ಪ ಕಟ್ಟಿ ಅವರ ಕಥೆ ಆಧರಿತ ‘ಊರ್ಧ್ವರೇತ’ ಕಿರುಚಿತ್ರವನ್ನು ಬಿಡುಗಡೆ ಮಾಡಲಿದ್ದಾರೆ. ವಿಜಯಪುರದ ಬಿ.ಎಲ್.ಡಿ.ಇ ಸಂಸ್ಥೆಯ ನಿರ್ದೇಶಕ ಅಶೋಕ ವಾರದ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ.

ಡಾ.ವೀರಣ್ಣ ದಂಡೆ ಬದುಕು ಬರಹ ಅನ್ನೋ ಕೃತಿಯನ್ನು ಅಸ್ಕಿಯ ಪ್ರಗತಿಪರ ರೈತರಾದ ಎಸ್.ಎಸ್ ಪಾಟೀಲ ಬಿಡುಗಡೆ ಮಾಡಲಿದ್ದಾರೆ. ಕೃತಿಯ ಲೇಖಕರಾದ ಕಲಬುರಗಿಯ ಲೇಖಕ ಡಾ.ಶಿವರಂಜನ ಸತ್ಯಂಪೇಟ ಪುಸ್ತಕದ ಬಗ್ಗೆ ಮಾತನಾಡಲಿದ್ದಾರೆ. ಅಭಿನಂದನ ನುಡಿಯನ್ನು ಫ.ಗು ಹಳಕಟ್ಟಿ ಸಂಶೋಧನ ಕೇಂದ್ರದ ಕಾರ್ಯದರ್ಶಿ ಡಾ.ಎಂ.ಎಸ್ ಮದಭಾವಿ ಆಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹಿರಿಯ ಚಿಂತಕ ಡಾ.ಆರ್.ಕೆ ಕುಲಕರ್ಣಿ, ಚಾಣಕ್ಯ ಕರಿಯರ್ ಅಕಾಡೆಮಿಯ ಎನ್.ಎಂ ಬಿರಾದಾರ, ಚಲನಚಿತ್ರ ನಿರ್ದೇಶಕ ಸುನಿಲಕುಮಾರ ಸುಧಾಕರ ಉಪಸ್ಥಿತಿ ಇರಲಿದೆ ಎಂದು ಪ್ರತಿಷ್ಠಾನದ ಸಂಚಾಲಕ ಡಾ.ಚನ್ನಪ್ಪ ಕಟ್ಟಿ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!